ಬೆಂಗಳೂರು: ಹಿಂದಿನ ವರ್ಷದಲ್ಲಿ ಅನುಉತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರಿಕ್ಷೆ ಬರೆಯಲು ಇದು ಉತ್ತಮ ಅವಕಾಶವಾಗಿದೆ. 2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಪೂರಕ ಪರೀಕ್ಷೆಯನ್ನು ನಡೆಸುವುದಾಗಿ ಶಿಕ್ಷಣ ಮಂಡಳಿ ಪ್ರಕಟಿಸಿದೆ.
ಎರಡನೇ ಬಾರಿ ಪೂರಕ ಪರೀಕ್ಷೆಯನ್ನು ನಡೆಸುವ ಪಿಯು ಮಂಡಳಿಯ ನಿರ್ಧಾರವು ಈಗಾಗಗಲೇ ಪೂರಕ ಪರೀಕ್ಷೆಯನ್ನು ಬರೆದ ಮತ್ತು ಹಿಂದಿನ ವಾರ್ಷಿಕ ಮತ್ತು ಪೂರಕ ಪರೀಕ್ಷೆಯಲ್ಲಿ ಯಶಸ್ವಿಯಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುವ ಗುರಿಯನ್ನು ಹೊಂದಿದ್ದು ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಇದೊಂದು ಸದಾವಕಾಶವಾಗಿದೆ.
ಪೂರಕ ಪರೀಕ್ಷೆಯ ವೇಳಾಪಟ್ಟಿ ಮುಂಬರುವ ಎರಡನೇ ಪೂರಕ ಪರೀಕ್ಷೆಯು ಆಗಸ್ಟ್ 28 ರಿಂದ ಸೆಪ್ಟೆಂಬರ್ 2 ರವರೆಗೆ ನಡೆಯಲಿದೆ. ವರ್ಷದ ಹಿಂದಿನ ಸಾಮಾನ್ಯ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪರೀಕ್ಷೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ https://kseab.karnataka.gov.inನಲ್ಲಿ ಪ್ರಕಟವಾಗಿದೆ.
ವರದಿಗಾರರು
ಎಲ್.ಮಂಜುನಾಥ(ವಿಜಯನಗರ)