ಬೀದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್

ಬೀದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್

ದಾವಣಗೆರೆ : ಕೇಂದ್ರ ಸರ್ಕಾರ ಆತ್ಮ ನಿರ್ಭರ್ ನಿಧಿ ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ 10000 ರೂ. ಕಿರು ಸಾಲ ಮತ್ತು ಬಡ್ಡಿ ಸಹಾಯ ಧನ ನೀಡಲು ಮುಂದಾಗಿದ್ದು, ಆಸಕ್ತ ಬೀದಿ ವ್ಯಾಪಾರಸ್ಥರು ಅರ್ಜಿ ಸಲ್ಲಿಸಬಹುದು.

ಲಾಕ್‍ಡೌನ್ ಅವಧಿ ಬೀದಿ ವ್ಯಾಪಾರಸ್ಥರ ಜೀವನದ ಮೇಲೆ ಅಪಾರ ಪರಿಣಾಮ ಬೀರಿದೆ. ಇದರಿಂದ ಜೀವನ ವ್ಯವಸ್ಥೆಯೇ ಬದಲಾಗಿ ಹೋಗಿದೆ.
ಮತ್ತೊಂದು ವಿಶೇಷತೆ ಏನೇಂದ್ರೆ ಅರ್ಜಿ ಸಲ್ಲಿಸಿದ ಕೇವಲ 10 ದಿನಗಳ ಒಳಗಾಗಿ ಸಾಲ ಮತ್ತು ಸಹಾಯಧನ ದೊರಯಲಿದೆ.

ಹಾಗಾಗಿ ಬೀದಿ ಬದಿ ವ್ಯಾಪಾರಸ್ಥರು ತಕ್ಷಣ ಅರ್ಜಿ ಸಲ್ಲಿಸಿ, ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ.

ಅದ್ರಂತೆ, ಆಸಕ್ತರು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಬೀದಿ ಬದಿ ವ್ಯಾಪಾರಸ್ಥರ ಕಾರ್ಡ್ ಹೊಂದಿರದವರು ಮಹಾನಗರ ಪಾಲಿಕೆಯಲ್ಲಿ ತೆರೆಯಲಾಗಿರುವ ಸಹಾಯ ಕೇಂದ್ರದ ಮೂಲಕ 24 ಗಂಟೆಯೊಳಗೆ ಕಾರ್ಡ್ ಪಡೆಯಬಹುದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Related