ಮಹಿಳೆಯರ ಸುರಕ್ಷತೆಗೆ ಸರ್ಕಾರ ಆದ್ಯತೆ : ಬಿ.ಎಸ್

ಮಹಿಳೆಯರ ಸುರಕ್ಷತೆಗೆ ಸರ್ಕಾರ ಆದ್ಯತೆ : ಬಿ.ಎಸ್

ಬೆಂಗಳೂರು : ಮಹಿಳೆಯರ ಸುರಕ್ಷತೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಮಹಿಳೆಯರ ಕುರಿತು ಸಮಾಜದ ದೃಷ್ಟಿಕೋನ ಬದಲಾಗಬೇಕಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪೊಲೀಸ್ ಇಲಾಖೆಯಲ್ಲಿರುವ ಮಾನವ ಕಳ್ಳ ಸಾಗಣೆ ನಿಷೇಧ ದಳಗಳಿಗೆ ನಿರ್ಭಯ ಯೋಜನೆಯಡಿ 751 ಬೈಕ್‌ಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, ‘ರಾಜ್ಯ ಮಹಿಳೆಯರಿಗೆ ಅತ್ಯಂತ ಸುರಕ್ಷಿತವಾಗಿದೆ’ ಎಂದರು.

ಮಹಿಳೆಯರು ನಿರ್ಭೀತಿಯಿಂದ ಇರುವ ವಾತಾವರಣ ನಿರ್ಮಿಸಲು, ಮುಕ್ತ ಓಡಾಟ, ಸುರಕ್ಷತೆಗೆ ಕೇಂದ್ರ ಸರ್ಕಾರ ಸ್ಥಾಪಿಸಿದ ನಿರ್ಭಯ ಯೋಜನೆಯಡಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಈಗಾಗಲೇ ತೆಗೆದುಕೊಂಡಿದೆ. ರಾಜ್ಯದ 700 ಪೊಲೀಸ್ ಠಾಣೆಗಳಲ್ಲಿ ಸಹಾಯವಾಣಿ ಆರಂಭಿಸಲು ಕೇಂದ್ರ ಸರ್ಕಾರ 7 ಕೋಟಿ ನೀಡಿದೆ ಎಂದು ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.

Related