ಇಲಾಖೆಗಳ ವಿಭಜನೆಗೆ ಕಾರಜೋಳ ಸೂಚನೆ

ಇಲಾಖೆಗಳ ವಿಭಜನೆಗೆ ಕಾರಜೋಳ ಸೂಚನೆ

ಬೆಂಗಳೂರು : ಲೋಕೋಪಯೋಗಿ, ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಅಭಿವೃದ್ಧಿ ಇಲಾಖೆಯನ್ನು ಶೀಘ್ರವಾಗಿ ವಿಭಜಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದರು.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಮೂರು ಇಲಾಖೆಗಳನ್ನು ವಿಭಜಿಸಲು ಕಳೆದ ಹಲವು ವರ್ಷಗಳಿಂದ ಪ್ರಯತ್ನಿಸಲಾಗುತ್ತಿದೆ. ಇಂಜಿನಿಯರ್‌ಗಳು ಹಾಗೂ ಇಂಜಿನಿಯರಿಂಗ್ ಸಂಘದ ಪದಾಧಿಕಾರಿಗಳ ಅಭಿಪ್ರಾಯವನ್ನು ಪಡೆದು, ಈ ಮಾಹಿತಿ ಕ್ರೋಢಿಕರಿಸಲಾಗಿದೆ. ಸಾಧಕ ಬಾಧಕಗಳ ಚರ್ಚಿಸಿ ವಿಭಜಿಸುವ ಉತ್ತಮ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮೂರು ಇಲಾಖೆಗಳನ್ನು ವಿಭಜಿಸಲು ಸಹಕರಿಸಿದ ಸಚಿವರಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಅಭಿವೃದ್ಧಿ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ, ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದರು.

Related