ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ: ಸಿಎಂ

ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ: ಸಿಎಂ

ಬೆಂಗಳೂರು: ಇಂದು ಭಾರತ ದೇಶದಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತೊಡಗಿರುವಂತಹ ಸಮಸ್ತ ಭಾರತ ಜನತೆಗೆ ಕರ್ನಾಟಕ ಮುಖ್ಯಮಂತ್ರಿ ಆದಂತಹ ಸಿದ್ದರಾಮಯ್ಯ ಅವರು ಸ್ವಾತಂತ್ರ್ಯ ದಿನಾಚರಣೆಯದ ಶುಭಾಶಯ ತಿಳಿಸಿದರು. ಇನ್ನು ಈ ಸಂದರ್ಭದಲ್ಲಿ ಭಾಷಣ ಮಾಡಿದ ಅವರು, ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾನಿಕ್ ಷಾ ಮೈದಾನದಲ್ಲಿಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ನಾಡಿನ ಸಮಸ್ತ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.

ಇನ್ನು ಮಾನಿಕ್ ಷಾ ಪೆರೇಡ್ ಗ್ರೌಂಡ್ ನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಆಗಮಿಸುವ ಹಿನ್ನಲೆ ಪೊಲೀಸರು ಮೈದಾನದ ಸುತ್ತ ಹದ್ದಿನ ಕಣ್ ಇಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸರು ಎರಡು ರೀತಿಯಲ್ಲಿ ಅಗತ್ಯ ತಯಾರಿ ಮಾಡಿಕೊಂಡಿದ್ದಾರೆ.

Related