ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ವಿಪರೀತ ಬರಗಾಲ ಕಾಡುತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡಿದ್ದರೂ ಕೂಡ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡದಿದ್ದ ಕಾರಣ ರಾಜ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿತು ಈ ಅರ್ಜಿಗೆ ಇಂದು ಏಪ್ರಿಲ್ 22 ಸುಪ್ರೀಂಕೋರ್ಟ್ ಅಸ್ತು ಎಂದಿದೆ.
ಹೌದು ,ಏಪ್ರಿಲ್ 29 ರ ಒಳಗಾಗಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ಬಿಡುಗಡೆ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಇನ್ನು ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಕಳೆದ ಸಪ್ಟಂಬರ್ 2023ರಲ್ಲಿ ನಾವು ರಾಜ್ಯದ ಪರಿಹಾರದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದೆವು, ಆ ಹೋರಾಟದ ಪ್ರತಿಫಲ ನಮಗಿಂದು ದೊರಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ
ಏಪ್ರಿಲ್ 29ರೊಳಗೆ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು. ಇನ್ನು ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಸರಕಾರದ ಪರ ವಕೀಲರು ಕೇಳಿಕೊಂಡರು. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿತು.
Thanks to the intervention of the Hon. Supreme Court, the Central Government, which had delayed providing drought relief funds to the farmers of Karnataka, has agreed to make a decision within this week.
Karnataka was forced to file a writ petition against the Central Government…
— Siddaramaiah (@siddaramaiah) April 22, 2024