ಚುನಾವಣೆ ಖರ್ಚಿಗೆಂದು ಕೈ ಅಭ್ಯರ್ಥಿಗೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ

ಚುನಾವಣೆ ಖರ್ಚಿಗೆಂದು ಕೈ ಅಭ್ಯರ್ಥಿಗೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತಹ ಸುನಿಲ್ ಬೊಸ್ ಅವರು ಇಂದು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯತಿ ಹರವೆಯಲ್ಲಿ ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್‌ ಅವರು ಮತ ಪ್ರಚಾರ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಿಂದ ನಮ್ಮ ರಾಜ್ಯದಲ್ಲಿರುವ ಹೆಣ್ಣು ಮಕ್ಕಳಿಗೆ ತುಂಬಾ ಸಹಾಯವಾಗಿದೆ ಎಂದು ಗ್ರಾಮದಲ್ಲಿ ಮಹಿಳೆಯೊಬ್ಬರು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರು ಪ್ರಚಾರ ಮಾಡುತ್ತಿರುವ ಸಂದರ್ಭದಲ್ಲಿ ಹೇಳಿದ್ದಾರೆ.

ಇನ್ನು ಚುನಾವಣೆ ಕರ್ಚಿಗೆಂದು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯೊಬ್ಬರು ಸುನಿಲ್ ಬೊಸ್ ಅವರಿಗೆ 2000 ರೂ ಹಣವನ್ನು ನೀಡಿದ್ದಾರೆ. ಕೇಂದ್ರದಲ್ಲೂ ಕೂಡ ಕಾಂಗ್ರೆಸ್ ಆಡಳಿತಕ್ಕೆ ಬರಬೇಕೆಂದು ಕಾಂಗ್ರೆಸ್ ಅಭ್ಯರ್ಥಿಗೆ ಆಶೀರ್ವದಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಯೋಜನೆಗಳಿಂದ ನಮ್ಮಂತಹ ಬಡ ಕುಟುಂಬಗಳಿಗೆ ಎಲ್ಲಿಲ್ಲದ ಸಹಾಯವಾಗಿದೆ ಎಂದು ಈ ಸಂದರ್ಭದಲ್ಲಿ ಮಹಿಳೆ ಹೇಳಿದರು.

 

 

 

 

Related