ಗ್ರಾ.ಪಂ ಚುನಾವಣೆ ಸ್ಥಗಿತ

ಗ್ರಾ.ಪಂ ಚುನಾವಣೆ ಸ್ಥಗಿತ

ಬಳ್ಳಾರಿ : ಚಿಹ್ನೆ ಮುದ್ರಣ ದೋಷದಿಂದಾಗಿ ಬಳ್ಳಾರಿ ತಾಲೂಕಿನ ಶಂಕರಬಂಡೆ ಗ್ರಾಪಂ ವ್ಯಾಪ್ತಿಯ ತೊಲಮಾಮಡಿ ಮತಗಟ್ಟೆಯಲ್ಲಿ ಮತದಾನ ಸ್ಥಗಿತವಾಗಿದೆ. ಮುದ್ರಣದ ದೋಷದ ಹಿನ್ನೆಲೆ ಮತದಾನವನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಆದೇಶ ಮಾಡಿದ್ದಾರೆ.

ಸುದ್ದಿ ಅರಿಯುತ್ತಲೇ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದಲು ಅಡಾವತ್, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ತಹಶೀಲ್ದಾರ ರೆಹಮಾನ್ ಪಾಶಾ ಅವರು ಪರಿಶೀಲನೆ ನಡೆಸಿದರು.

ಗ್ರಾ.ಪಂ ವ್ಯಾಪ್ತಿಯ ರಿಟರ್ನಿಂಗ್ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಎರಡನೇ ಹಂತದ ಚುನಾವಣೆಯ ದಿನ ಅಥವಾ ಇನ್ನೊಂದು ದಿನ ಈ ಮತಗಟ್ಟೆಯಲ್ಲಿ ಮತದಾನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ತಿಳಿಸಿದ್ದಾರೆ.

Related