ಜಿ.ಟಿ ದೇವೇಗೌಡ ಮನೆಗೆ ನಿಖಿಲ್ ದಂಪತಿ ಭೇಟಿ

ಜಿ.ಟಿ ದೇವೇಗೌಡ ಮನೆಗೆ ನಿಖಿಲ್ ದಂಪತಿ ಭೇಟಿ

ಬೆಂಗಳೂರು  : ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಮಾಜಿ ಉನ್ನತ ಶಿಕ್ಷಣ ಸಚಿವ ಜಿ,ಟಿ ದೇವೇಗೌಡರ ಮನೆಗೆ ದಿಢೀರ್ ಭೇಟಿ ನೀಡುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.

ಮೈಸೂರಿನ ಜೆಡಿಎಸ್ ದೈತ್ಯ ನಾಯಕ ಎಂದೇ ಪರಿಗಣಿತವಾಗಿರುವ ಜಿ,ಟಿ ದೇವೇಗೌಡ 2018ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು.

ಜೆಡಿಎಸ್ ಜೊತೆ ಜಿ.ಟಿ ದೇವೇಗೌಡರ  ಸಂಬಂಧ  ಹಳಸಿರುವ ಕಾರಣ ನಿಖಿಲ್ ಅದನ್ನು ಸರಿಪಡಿಸಲು ಭೇಟಿ ನೀಡಿರಬಹುದು ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇನ್ನೂ ಇತ್ತೀಚೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿ.ಟಿ ದೇವೇಗೌಡ ಇನ್ನೂ ಜೆಡಿಎಸ್ ಪಕ್ಷದಲ್ಲೇ ಇದ್ದಾರೆ ಎಂದು ಹೇಳಿಕೆ ನೀಡಿದ್ದರು.

Related