ಹಸ್ತಕ್ಕೆ ಮತ ದೇಶಕ್ಕೆ ಹಿತ: ರಾಮಲಿಂಗಾರೆಡ್ಡಿ

ಹಸ್ತಕ್ಕೆ ಮತ ದೇಶಕ್ಕೆ ಹಿತ: ರಾಮಲಿಂಗಾರೆಡ್ಡಿ

ಬೆಂಗಳೂರು: ಸಾರಿಗೆ ಸಚಿವರಾಗಿರುವಂತಹ ರಾಮಲಿಂಗಾರೆಡ್ಡಿ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ಪರವಾಗಿ ಇಂದು ಶುಕ್ರವಾರ ಏಪ್ರಿಲ್ 19ರಂದು ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಕೃಷ್ಣಪ್ಪ ಅವರ ನೇತೃತ್ವದಲ್ಲಿ ವಿಜಯನಗರ ವಿಧಾನಸಭಾ ಸುತ್ತಮುತ್ತಲಿನಲ್ಲಿ ಬರುವಂತಹ ಪಿ.ಅಗ್ರಹಾರ , ಚೋಳರಪಾಳ್ಯ, ವಿದ್ಯಾರಣ್ಯಪುರ, ವಿಜಯನಗರ ಪೈಪ್ ಲೈನ್, ಹೊಸಹಳ್ಳಿ, ಹಂಪಿನಗರ, ಅತ್ತಿಗುಪ್ಪೆ , ಚಂದ್ರ ಬಡಾವಣೆ ಹಾಗೂ ದೀಪಾಂಜಲಿ ನಗರ ಸುತ್ತ ಮುತ್ತಲೂ ತೆರದ ವಾಹನದಲ್ಲಿ ಬೈಕ್ ರ್ಯಾಲಿ ಮೂಲಕ ಸಾಗಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅರಾಮಲಿಂಗ ರೆಡ್ಡಿ ಅವರು, ಹಸ್ತಕ್ಕೆ ಮತ ದೇಶಕ್ಕೆ ಹಿತ, ಹಾಗಾಗಿ ನಿಮ್ಮ ಅಮೂಲ್ಯವಾದ ಮತವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿ ಸೌಮ್ಯ ರೆಡ್ಡಿ ಅವರನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಈ ಬೈಕ್ ರ್ಯಾಲಿಯಲ್ಲಿ ಕಾಂಗ್ರೆಸ್ಸಿನ ಸಾವಿರಾರು ಕಾರ್ಯಕರ್ತರು ಭಾಗಿಯಾಗಿ ಹಸ್ತಕ್ಕೆ ಮತ ದೇಶಕ್ಕೆ ಹಿತ ಎಂಬ ಕೂಗನ್ನು ಕೂಗುತ್ತಾ, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಸೌಮ್ಯ ರೆಡ್ಡಿ ಅವರ ರ್ಯಾಲಿಯನ್ನು ಯಶಸ್ವಿಗೊಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related