ನೇಣುಗಂಬದಲ್ಲಿ ನೇತಾಡಿದ ಕೀಚಕರು

ನೇಣುಗಂಬದಲ್ಲಿ ನೇತಾಡಿದ ಕೀಚಕರು

ನವದೆಹಲಿ, ಮಾ. 20 : ನಿರ್ಭಯಾಳಿಗೆ ನ್ಯಾಯ ಸಿಕ್ಕಿದೆ. ನ್ಯಾಯದಾನ ವಿಳಂಬವಾಗಿದೆ. ಆದರೂ ನ್ಯಾಯ ಸಿಕ್ಕಿದೆ. ನನ್ನ ಮಗಳ ಬಗ್ಗೆ ಹೆಮ್ಮೆ ಇದೆ. ಇಂದು ದೇಶಕ್ಕೆ ನ್ಯಾಯ ಸಿಕ್ಕಿದೆ. ಈ ದಿನವನ್ನು ದೇಶದ ಹೆಣ್ಣುಮಕ್ಕಳಿಗೆ ಆರ್ಪಿಸುವುದಾಗಿ ನಿರ್ಭಯಾ ತಾಯಿ ಆಶಾದೇವಿ ಹೇಳಿದರು.

ಹಂತಕರ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ವಜಾಗೊಳ್ಳುತ್ತಿದ್ದ ಮಾಧ್ಯಮಗಳ ಜೊತೆ ಮಾತನಾಡಿದ ನಿರ್ಭಯಾ ತಾಯಿ ಆಶಾ ದೇವಿ, ಜೀತೇಂದ್ರ ಮತ್ತು ಸೀಮಾಜೀ ವಕೀಲಿ ವೃತ್ತಿ ಜೊತೆ ತಮ್ಮ ಕೆಲಸ ಮಾಡಿದರು. ನಮ್ಮ ನ್ಯಾಯ ಸಿಗಲಿದೆ ಎಂಬ ಭರವಸೆಯನ್ನು ನೀಡಿದ್ದರು. ಇಂದು ಕೊನೆಗೂ ನಮಗೆ ನ್ಯಾಯ ಸಿಕ್ಕಿದೆ ಎಂದರು. ನಮ್ಮನ್ನು ಆಕೆ ಅಗಲಿದ ನಂತರ ಈ ಹೋರಾಟವನ್ನು ಆರಂಭಿಸಲಾಯಿತು. ನಿರ್ಭಯಾಳಿಗಾಗಿ ಆರಂಭಿಸಿದ ಹೋರಾಟವನ್ನು ದೇಶದ ಹೆಣ್ಣುಮಕ್ಕಳ ಭವಿಷ್ಯಕ್ಕಾಗಿ ಮುಂದುವರೆಸಲಾಗುವುದು ಎಂದು ಆಶಾದೇವಿ ತಿಳಿಸಿದರು.

Related