ಲವ್ ಜಿಹಾದ್ ಕೊನೆಗಾಣಿಸಲು ಕಠಿಣ ಕ್ರಮ : ಸಿಎಂ

ಲವ್ ಜಿಹಾದ್ ಕೊನೆಗಾಣಿಸಲು ಕಠಿಣ ಕ್ರಮ : ಸಿಎಂ

ಮಂಗಳೂರು : ಹಣದ ಆಮಿಷ, ಪ್ರೀತಿ ಪ್ರೇಮದಲ್ಲಿ ನಡೆಯುವ ಮತಾಂತರಕ್ಕೆ ಬ್ರೇಕ್ ಹಾಕುತ್ತೇವೆ. ರಾಜ್ಯದಲ್ಲಿ ಲವ್ ಜಿಹಾದ್ ಕೊನೆಗಾಣಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ,  ದೇಶದಲ್ಲಿ ರಾಜ್ಯ ಮಾದರಿಯಾಗಿ ಬೆಳೆಯುತ್ತಿದೆ. ರಾಜ್ಯದಲ್ಲಿ ಡ್ರಗ್ಸ್ ಮಾಫಿ ಮಟ್ಟ ಹಾಕುತ್ತಿದ್ದೇವೆ ಎಂದರು.

18 ಮಂದಿಯ ಸಹಾಯದಿಂದ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದೇವೆ. ಬಿಜೆಪಿ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡಲಾಗುತ್ತಿದೆ. ಬಿಜೆಪಿ ಪಕ್ಷದ ಬಲವರ್ಧನೆಯೇ ನಮ್ಮ ಗುರಿ. ಯಾವುದೇ ಚುನಾವಣೆಯನ್ನು ಲಘುವಾಗಿ ತೆಗೆದುಕೊಳ್ಳುವಂತಿಲ್ಲ. ಬರುವಂತಹ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರಬೇಕು, ಅಧಿಕಾರದ ಮೂಲಕ ಜನರ ಸೇವೆ ಮಾಡಬೇಕು ಎಂದರು.

ಮಂಗಳೂರು ಮಹಾನಗರ ಪಾಲಿಕೆ ಸೇರಿ ಹತ್ತು ಪಾಲಿಕೆಗಳಿಗೆ ತಲಾ 50 ಕೋ.ರೂ ಮಂಜೂರು ಮಾಡಲಾಗುವುದು. ಸಮುದ್ರದ ಅಲೆಗಳಿಂದ ವಿದ್ಯುತ್ ತಯಾರಿಕೆಗೂ ಆದ್ಯತೆ ನೀಡಲಾಗುವುದು. ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಯೋಜನೆ ಮಾಡಲಾಗುತ್ತಿದ್ದು, ಉದ್ಯೋಗ ಅವಕಾಶ ಸಿಗುವಂತೆ ಯೋಜನೆ ರೂಪಿಸುತ್ತಿದ್ದೇವೆ ಎಂದು ಸಿಎಂ ಬಿಎಸ್ ವೈ ಹೇಳಿದರು.

Related