ಬೆಳಗಾವಿ ಜಿಲ್ಲೆಯ ಜನರನ್ನ ಬಕ್ರಾ ಮಾಡಲು ಬಂದಿದ್ದಾರಾ?: ಹೆಬ್ಬಾಳ್ಕರ್

 ಬೆಳಗಾವಿ ಜಿಲ್ಲೆಯ ಜನರನ್ನ ಬಕ್ರಾ ಮಾಡಲು ಬಂದಿದ್ದಾರಾ?: ಹೆಬ್ಬಾಳ್ಕರ್

ಬೆಳಗಾವಿ: ಜಗದೀಶ್ ಶೆಟ್ಟರ್ ಅವರೇ… ನೀವು ಬೆಳಗಾವಿ ಜನರನ್ನು ಬಕ್ರಾ ಮಾಡಲು ಬಂದಿದ್ದೀರಾ? ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಗದೀಶ್ ಶೆಟ್ಟರ್ ಅವರ ವಿರುದ್ಧ ಕೆಂಡಮಂಡಲವಾಗಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ರವರೇ ಇಷ್ಟು ದಿನ ಬೆಳಗಾವಿ ಕ್ಷೇತ್ರಕ್ಕೆ ಏನು ಮಾಡಿದ್ದಾರೆ? ಬೆಳಗಾವಿ ಜನತೆಗೆ ಯಾವ ಕೆಲಸವನ್ನು ಮಾಡಿಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಜಗದೀಶ್ ಶೆಟ್ಟರನ್ನು ಹುಬ್ಬಳ್ಳಿ-ಧಾರವಾಡ ಜನ ಅವರ ಉದ್ಧಾರದ ಕೆಲಸವನ್ನು ನೋಡಿ ಹೊರಹಾಕಿದ್ದಾರೆ. ಈಗ ಬೆಳಗಾವಿಗೆ ಬಂದು ಇದು ನನ್ನ ಕರ್ಮ ಭೂಮಿ ಎಂದರೆ ಜನ ಒಪ್ಪುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಗೆ ನನ್ನ ಕರ್ಮಭೂಮಿ ಅಂದ್ರೆ ಆ ಜನ ಒಪ್ತಾರಾ? ನಾವೇನು ಹುಚ್ಚರಿದ್ದೇವಾ ಎಂದು ಜಗದೀಶ್ ಶೆಟ್ಟರ್ ವಿರುದ್ಧ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿಯಿಂದ ಶೆಟ್ಟರ್ ಆರು ಬಾರಿ ಆರಿಸಿ ಬಂದಿದ್ದಾರೆ. ಸಿಎಂ, ಮಂತ್ರಿಯಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಜಿಲ್ಲೆ ಮತ್ತು ಕಾರ್ಯಕರ್ತರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿದೆ. ಅವರ ಕಾರ್ಯಕರ್ತರೇ ಗೋಬ್ಯಾಕ್​ ಎಂದು ಹೇಳುತ್ತಿದ್ದಾರೆ ಎಂದರು.

 

 

Related