ದೆಹಲಿ: ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಇಂದು (ಜನವರಿ 12)ರಂದು ದೆಹಲಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಬಡ ಮಹಿಳೆ ಒಬ್ಬರು ತಮಗೆ ವಾಸಿಸಲು ಮನೆ ಇಲ್ಲವೆಂದು ಸಚಿವರ ಬಳಿ ಮನವಿ ಮಾಡಿ ಕೊಂಡಿದ್ದಾರೆ.
ಇನ್ನು ತಕ್ಷಣವೇ ಸಚಿವರು ಅಧಿಕಾರಿಗಳಿಗೆ ಕರೆ ಮಾಡಿ ಈ ಮಹಿಳೆಗೆ ಒಂದು ಸೂರು ಮಾಡಿಕೊಡುವ ವ್ಯವಸ್ಥೆಯನ್ನು ಮಾಡಬೇಕೆಂದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರದ ಯಶೋಧಮ್ಮ ಎನ್ನುವರು ಸಚಿವರ ಭೇಟಿಗಾಗಿ ದೆಹಲಿಗೆ ಹೋಗಿದ್ದರು ಅದರಂತೆ ಇಂದು ಸಚಿವರನ್ನು ಭೇಟಿ ಮಾಡಿ ತಮ್ಮ ಮನವಿಯನ್ನು ಸಲ್ಲಿಸಿ ಮನೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಸ್ಥಳದಲ್ಲೇ ಆ ಮನವಿಗೆ ಸ್ಪಂದಿಸಿದ ಹೆಚ್.ಸಿ.ಮಹದೇವಪ್ಪ ಅವರು ಸ್ಲಂಬೋರ್ಡ್ ಅಧಿಕಾರಿಗಳಿಗೆ ಕರೆ ಮಾಡಿ ಮಹಿಳೆಗೆ ಮನೆ ನೀಡುವಂತೆ ಸೂಚನೆ ನೀಡಿದರು.