ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗೆ ಹಿಂದೇಟು

ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗೆ ಹಿಂದೇಟು

ದಾವಣಗೆರೆ : ದಾವಣಗೆರೆಯ ಜಿಲ್ಲಾಸ್ಪತ್ರೆಗೆ ಬರುವವರನ್ನು ಚಿಕಿತ್ಸೆ ನೀಡದೇ ವಾಪಸ್ ಕಳುಹಿಸುತ್ತಿದ್ದು, ರೋಗಿಗಳು ಪರದಾಡುವಂತೆ ಆಗಿದೆ. ಕೊರೋನಾ ನೆಪವೊಡ್ಡಿ ಜನರನ್ನು ಸೇರಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದು, ಈ ಆಸ್ಪತ್ರೆಯನ್ನೇ ನಂಬಿಕೊಂಡು ಬಂದ ಬಡ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ.

ಭಾನುವಾರವೂ ಇಂಥದ್ದೇ ಸಂಗತಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊಪ್ಪಳ ಮೂಲದ ವಿದ್ಯಾರ್ಥಿ ಮಂಜುನಾಥ ಅವರಿಗೆ ತಡರಾತ್ರಿ ರಕ್ತವಾಂತಿ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಬಂದಿದ್ದರು.

ಆದರೆ ಇಬ್ಬರಿಗೂ ಚಿಕಿತ್ಸೆ ನೀಡದೇ ವಾಪಸ್ ಕಳುಹಿಸಲು ಮುಂದಾಗಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ಚಿಕಿತ್ಸೆ ನೀಡದೆ ರೋಗಿಗಳನ್ನು ಸತಾಯಿಸಿದ್ದಾರೆ.

ಜಿಲ್ಲಾಸ್ಪತ್ರೆ ಮಾತ್ರವಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೂ ಇದೇ ರೀತಿಯಾಗಿದೆ. ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭ ಸೂಕ್ತ ಚಿಕಿತ್ಸೆ ಸಿಗದೇ ಭಾನುವಾರ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ.

ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಹಾಗೂ ತಾವರೆಕೆರೆ ಗ್ರಾಮಸ್ಥರು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related