ಹಿಂದೂ ವ್ಯಕ್ತಿ ಹತ್ಯೆ ಬಗ್ಗೆ ಮಾತ್ನಾಡಲು ಬಾಯಿಗೆ ಲಕ್ವಾ ಹೊಡೆದಿದೆಯಾ- ಕಾಂಗ್ರೆಸ್ ವಿರುದ್ಧ ಆರಗ ಕಿಡಿ

  • In Crime
  • June 29, 2022
  • 246 Views
ಹಿಂದೂ ವ್ಯಕ್ತಿ ಹತ್ಯೆ ಬಗ್ಗೆ ಮಾತ್ನಾಡಲು ಬಾಯಿಗೆ ಲಕ್ವಾ ಹೊಡೆದಿದೆಯಾ- ಕಾಂಗ್ರೆಸ್ ವಿರುದ್ಧ ಆರಗ ಕಿಡಿ

ಬೆಂಗಳುರು, ಜೂ 29 : ಹಿಂದೂ ವ್ಯಕ್ತಿ ಬಗ್ಗೆ ಮಾತನಾಡಲು ಬುದ್ಧಿ ಜೀವಿಗಳ ಬಾಯಿಗೆ ಲಕ್ವಾ ಹೊಡೆದಿದೆಯಾ ? ಎಂದು ಆರಗ ಜ್ಞಾನೆಂದ್ರ ಕಾಂಗ್ರೆಸ್ ನಾಯಕರನ್ನು ಟೀಕಿಸಿದರು.
ರಾಜಸ್ಥಾನದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳಲ್ಲಿ ದೃಶ್ಯ ನೋಡಿದ್ದೇನೆ. ಅಂತಹ ದೃಶ್ಯ ನೋಡಬಾರದು. ಅತ್ಯಂತ ಕ್ರೂರ ಹಾಗೂ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ. ಅವರು ಮನುಷ್ಯರು ಹೌದೋ ಅಲ್ವೋ ಎಂಬ ಅನುಮಾನ ಶುರುವಾಗಿದೆ ಎಂದು ಕಿಡಿಕಾರಿದರು.
ಈ ರೀತಿಯ ರಾಕ್ಷಸಿ ಪೈಶಾಚಿಕ ಕೃತ್ಯ ಮಾಡುವಂತವರಿಗೆ ಕಠಿಣ ಶಿಕ್ಷೆ ಕೊಡಿಸಲು ಸಾಧ್ಯ ಆಗುತ್ತೆ. ಅದನ್ನು ಯೋಚನೆ ಮಾಡಬೇಕು. ಕಾಂಗ್ರೆಸ್ನ ರಾಜಸ್ಥಾನ ಸರ್ಕಾರ ಇದಕ್ಕೆ ಖಂಡಿತವಾಗಿ ಉತ್ತರಕೊಡಬೇಕು. ಈ ವ್ಯಕ್ತಿಗಳು ರಾಜ್ಯದಲ್ಲಿ ಬೆಳೆದಿದ್ದಾರೆ. ಆ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಈ ಘಟನೆಯನ್ನ ಖಂಡಿತವಾಗಿ ಇಡೀ ಜನ ಸಮುದಾಯ ಖಂಡಿಸಬೇಕು. ಆಗ ಈ ದ್ರೋಹಿಗಳು ತಲೆ ಎತ್ತದಂತೆ ಆಗುತ್ತೆ. ಇದು ಅತ್ಯಂತ ದುರದೃಷ್ಟಕರ ಸಂಗತಿ. ಮತಾಂಧ ಶಕ್ತಿಗಳು ಧರ್ಮ ಅಂದರೆ ಕೊಲೆ, ರಕ್ತಪಾತ ಎಂದು ಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Related