ಭೀಕರ ಅಪಘಾತ : 13 ಜನ ದುರ್ಮರಣ  

 ಭೀಕರ ಅಪಘಾತ : 13 ಜನ ದುರ್ಮರಣ  

ತುಮಕೂರು,ಮಾ.06 :  ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಣಿಗಲ್​ ತಾಲೂಕಿನ ಬ್ಯಾಲದಕೆರೆ ಬಳಿ ನಡೆದಿದೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.. ಪರಿಣಾಮ ಎರಡೂ ಕಾರುಗಳಲ್ಲಿದ್ದ 13 ಮಂದಿ ದುರಂತ ಸಾವನ್ನಪ್ಪಿದ್ದಾರೆ. ಮುಂಜಾನೆ 3 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ. ರಸ್ತೆ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರಿನಲ್ಲಿ ತಮಿಳುನಾಡು ಮೂಲದವರಿದ್ದು, ಧರ್ಮಸ್ಥಳದಿಂದ ವಾಪಸ್ ಬರುತ್ತಿದ್ದರು ಎನ್ನಲಾಗಿದೆ. ಎದುರಿನಿಂದ ವೇಗವಾಗಿ ಬಂದ ಕಾರಿನಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರಿದ್ದರು ಎಂದು ತಿಳಿದು ಬಂದಿದೆ. ಕೆಟ್ಟ ಸಾಲದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಯೆಸ್​ ಬ್ಯಾಂಕ್ ಆಡಳಿತ ಮಂಡಳಿ ಸುಪರ್ದಿಗೆ ಪಡೆದ ಆರ್​ಬಿಐ ಮೃತಪಟ್ಟವರನ್ನು ತಮಿಳುನಾಡು ಮೂಲದ ಮಂಜುನಾಥ್ (35), ತನುಜಾ (25), ಒಂದು ವರ್ಷದ ಹೆಣ್ಣು ಮಗು, ಗೌರಮ್ಮ (60), ರತ್ನಮ್ಮ (52), ರಾಜೇಂದ್ರ (27), ಸುಂದರ್​ ರಾಜ್ (48), ಸರಳ (32), ಪ್ರಶನ್ಯಾ(14) ಎಂದು ಗುರುತಿಸಲಾಗಿದೆ. ಇವರು ಟವೇರಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇನ್ನು, ಮೃತಪಟ್ಟವರಲ್ಲಿ ಬೆಂಗಳೂರು ಮೂಲದವರು ಇದ್ದರೆನ್ನಾಗಿದ್ದು, ಅವರನ್ನು ಲಕ್ಷ್ಮೀಕಾಂತ್ (24), ಸಂದೀಪ್ (36), ಮಧು (28) ಎಂದು ಗುರುತಿಸಲಾಗಿದೆ.ಘಟನೆಯಲ್ಲಿ  ಶ್ವೇತಾ, ಅರ್ಪಿತಾ, ಮಾಲಾಶ್ರೀ, ಗಂಗೋತ್ರಿ ಎಂಬುವವರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಪ್ರಕಾಶ್​ ಎಂಬುವವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಾಲ್ವರು ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Related