ಮೂರು ತಿಂಗಳ ಅಕ್ಕಿ ಉಚಿತ!

ಮೂರು ತಿಂಗಳ ಅಕ್ಕಿ ಉಚಿತ!

ಬೆಂಗಳೂರು, ಏ. 17 : ಕೊರನಾ ವೈರಸ್ ಲಾಕ್ಡೌನ್ ಹಿನ್ನೆಲೆ ಎರಡು ತಿಂಗಳ ಪಡಿತರವನ್ನು ಒಮ್ಮೆಗೇ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೆಗೆದುಕೊಂಡಿರುವ ನಿರ್ಧಾರದಂತೆಯೇ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಗೋಪಾಲಯ್ಯ ಹೇಳಿದರು.
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದೇ ಮೊದಲ ಬಾರಿಗೆ ಎರಡು ತಿಂಗಳ ಪಡಿತರವನ್ನು ರಾಜ್ಯಾದ್ಯಂತ ವಿತರಣೆ ಮಾಡಲಾಗಿದೆ. ಬಿ.ಪಿ .ಎಲ್. ಕಾರ್ಡ್ ಗೆ ಅರ್ಜಿ ಸಲ್ಲಿಸಿರುವವರಿಗೂ ಶನಿವಾರದಿಂದ ಪ್ರತಿ ತಿಂಗಳಂತೆ 3 ತಿಂಗಳು ೧೦ ಕೆ.ಜಿ. ಅಕ್ಕಿ ನೀಡುತ್ತೇವೆ ಎಂದು ಹೇಳಿದರು. ಉಜ್ವಲ ಮತ್ತು ಸಿಎಂ ಅನಿಲ ಭಾಗ್ಯ ಯೋಜನೆಯನ್ನು ಮೂರು ತಿಂಗಳಿಗೆ ವಿಸ್ತರಿಸಲಾಗುತ್ತದೆ. ಮೂರು ತಿಂಗಳು ಉಚಿತ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Related