ನಾನು ಡಾಕ್ಟರ್ ಹುದ್ದೆಯಲ್ಲಿದ್ದಾಗಲೇ ಸಾರ್ವಜನಿಕರ ಸಂಪರ್ಕದಲ್ಲಿದ್ದೇನೆ: ಮಂಜುನಾಥ್

ನಾನು ಡಾಕ್ಟರ್ ಹುದ್ದೆಯಲ್ಲಿದ್ದಾಗಲೇ ಸಾರ್ವಜನಿಕರ ಸಂಪರ್ಕದಲ್ಲಿದ್ದೇನೆ: ಮಂಜುನಾಥ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿಯಾಗಿ ನಾನು ಏಪ್ರಿಲ್ 4ರಂದು ರಾಮನಗರದ ಡಿಸಿ ಕಚೇರಿಯಲ್ಲಿ ನನ್ನ ನಾಮ ಪತ್ರಿಕೆಯನ್ನು ಸಲ್ಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಅವರು ಹೇಳಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಇಷ್ಟು ವರ್ಷ ಡಾ. ಆಗಿ ಸೇವೆ ಸಲ್ಲಿಸುವುದರಲ್ಲಿ ನಾನು ಕೇವಲ ಎಸಿ ರೂಮನಲ್ಲಿ ಕುಳಿತುಕೊಂಡು ಕಾಲ ಕಳೆಯದೆ ಪ್ರತಿದಿನ ಆಸ್ಪತ್ರೆಗೆ ದಾಖಲಾಗಿರುವ ಬಡ ರೋಗಿಗಳನ್ನು ಹೋಗಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದೆ ಎಂದು ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಮಂಜುನಾಥ್ ಅವರು ಹೇಳಿದರು.

ಗ್ರಾಮೀಣ ಭಾಗದಿಂದ ಬಂದ ಬಡವರಿಗೆ ನಾನು ಚಿಕಿತ್ಸೆ ನೀಡಿದ್ದೇನೆ ಹಾಗಾಗಿ ನನಗೆ ಸಾರ್ವಜನಿಕರ ಸಂಪರ್ಕ ಇದೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾನೇ ಗೆಲ್ಲುವುದೆಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಈಗಾಗಲೇ ಬಿ ಫಾರಂ ಪಡೆದಿದ್ದೇನೆ, ಏಪ್ರಿಲ್ 4ರಂದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ‘ನನ್ನ ಸುಧೀರ್ಘ ಅವಧಿಯಲ್ಲಿ ಲಕ್ಷಾಂತರ ಬಡ ರೋಗಿಗಳಿಗೆ ಚಿಕಿತ್ಸೆ ಕೊಟ್ಟಿದ್ದೇನೆ. ನಾನು‌ ಬಡವರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ ಕೃಷಿಕರಿಗೆ ಹತ್ತಿರ ಇದ್ದೇನೆ ಎಂದು ಹೇಳಿದರು.

 

Related