ನಾನು ರಾಮ ವಿರೋಧಿ ಅಲ್ಲ: ಸಿಎಂ

ನಾನು ರಾಮ ವಿರೋಧಿ ಅಲ್ಲ: ಸಿಎಂ

ಶಿವಮೊಗ್ಗ: ನಾನು ಕೂಡ ರಾಮ ಭಕ್ತ. ನಾನು ರಾಮ ವಿರೋಧಿ ಅಲ್ಲ. ರಾಮ ಮಂದಿರ ಉದ್ಘಾಟನೆ ನಂತರ ನಾನು ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ವೀಕ್ಷಣೆ ಮಾಡಿ, ರಾಮನ ಆಶೀರ್ವಾದ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಶಿವಮೊಗ್ಗ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಮಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ನಾವು ರಾಮನನ್ನು ವಿರೋಧಿಸುತ್ತಿಲ್ಲ. ರಾಮಮಂದಿರ ವಿಚಾರದಲ್ಲಿ ಬಿಜೆಪಿಯ ರಾಜಕೀಯ ವಿರೋಧಿಸುತ್ತಿದ್ದೇವೆ ಎಂದರು.

ಇನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಂದರೇ ಸುಳ್ಳು, ಸುಳ್ಳು ಅಂದರೇ ಕುಮಾರಸ್ವಾಮಿ. ಹೆಚ್​ಡಿ ಕುಮಾರಸ್ವಾಮಿ ಹೇಳುವುದೆಲ್ಲ ಸುಳ್ಳು. ಹೆಚ್​.ಡಿ.ಕುಮಾರಸ್ವಾಮಿ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಮೂರು ಜನ ಉಪಮುಖ್ಯಮಂತ್ರಿಗಳ ಬಗ್ಗೆ ಪಕ್ಷದಲದಲಿ ಚರ್ಚೆ ನಡೆದಿಲ್ಲ ಎಂದು ವಾಗ್ದಾಳಿ ಮಾಡಿದರು.

 

Related