ಬೆಳಗಾವಿ ಅಧಿವೇಶನ ನನಗೆ ತೃಪ್ತಿ ತಂದಿಲ್ಲ: ಬಿಜೆಪಿ ಶಾಸಕ

ಬೆಳಗಾವಿ ಅಧಿವೇಶನ ನನಗೆ ತೃಪ್ತಿ ತಂದಿಲ್ಲ: ಬಿಜೆಪಿ ಶಾಸಕ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಚಳಿಗಾಲ ಅಧಿವೇಶನದಲ್ಲಿ ಸರಿಯಾಗಿ ಯಾವುದರ ಬಗ್ಗೆಯೂ ಚರ್ಚೆಯಾಗಿಲ್ಲ. ಇನ್ನು ಅಧಿವೇಶನದಲ್ಲಿ ವಿಪಕ್ಷವಾಗಿ ನಮ್ಮ ನಿರ್ವಹಣೆ ಸರಿ ಇರಲಿಲ್ಲವೆಂದು ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಮತ್ತೊಮ್ಮೆ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ವಿಪಕ್ಷವಾಗಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಿತ್ತು. ಕೆಲವೊಂದು ಕಡೆ ನಾವು ಕಾಂಪ್ರಮೈಸ್ ಆಗಿದ್ದೇವೆ ಎಂದು ಸ್ಫೋಟಕ ಹೇಳಿಕೆ ನೀಡಿದರು.

ಉತ್ತರ ಕರ್ನಾಟಕ ಚರ್ಚೆ ಅಂತ ಕಾಂಪ್ರಮೈಸ್ ಆಗಿದ್ದೇವೆ. ಈಗ ಸರ್ಕಾರ ಬಂದು ಏಳು ತಿಂಗಳು‌ ಆಗಿದೆ. ಇದು ಯಾರದೇ ವೈಫಲ್ಯ ಅಲ್ಲ. ಹೊಸದಾಗಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇನ್ನೂ ಸುಧಾರಣೆ ಆಗಬೇಕಿದೆ. ನಾಯಕತ್ವದ ಕೊರತೆ ನಮಗಿಲ್ಲ ಎಂದರು.

 

Related