BJP ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲಿ: ಡಿಸಿಎಂ

BJP ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲಿ: ಡಿಸಿಎಂ

ಕಲಬುರ್ಗಿ: ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ರಾಜ್ಯಕ್ಕೆ ನ್ಯಾಯ ಒದಗಿಸಲು ವಿಫಲವಾದ ಬಗ್ಗೆ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಅವರು ಒಂದು ದಿನವೂ ಪ್ರಧಾನಿ ಭೇಟಿ ಮಾಡಿ, ರಾಜ್ಯದ ಹಿತದ ಬಗ್ಗೆ ಧ್ವನಿ ಎತ್ತಲಿಲ್ಲ. ಮೊದಲು ಕೇಂದ್ರದ ಮೇಲೆ ಒತ್ತಡ ತಂದು ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲಿ. ಇದೇ ಕಾರಣಕ್ಕೆ ರಾಜ್ಯದ ಜನ ಅವರನ್ನು ಧಿಕ್ಕರಿಸಿದ್ದಾರೆ ಎಂದರು.

ಇನ್ನು ಬರಗಾಲದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ನೀಡದಿರುವುದು, ಬಜೆಟ್ ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ, ಈ ಹಿಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿದ ಅನುದಾನ ಬಿಡುಗಡೆ ಮಾಡದಿರುವುದರ ವಿರುದ್ಧ ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

 

Related