ಉದ್ಯಾನವನಗಳಲ್ಲಿ ಅವಕಾಶವಿಲ್ಲ

 ಉದ್ಯಾನವನಗಳಲ್ಲಿ ಅವಕಾಶವಿಲ್ಲ

ಬೆಂಗಳೂರು: ರಾಜ್ಯಾದ್ಯಂತ ಉದ್ಯಾನವನಗಳನ್ನು ಬೆಳಗ್ಗೆ 7ರಿಂದ 10 ಗಂಟೆ, ಸಂಜೆ 4 ರಿಂದ 7 ಗಂಟೆಯವರೆಗೂ ತೆರೆಯಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಪ್ರಶಾಂತ್ ನಗರದಲ್ಲಿ 309 ಹಾಸಿಗೆ ಸಾಮರ್ಥ್ಯದ ಹೆರಿಗೆ ಆಸ್ಪತ್ರೆಯ ಉದ್ಘಾಟನೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಉದ್ಯಾನವನಗಳಿಗೆ ಸಂಬಂಧಿಸಿದ ಆದೇಶ ಶೀಘ್ರದಲ್ಲಿಯೇ ಹೊರಬೀಳಲಿದೆ. ಆದಾಗ್ಯೂ, ನಿರ್ಬಂಧಗಳು ಇದೇ ರೀತಿಯಲ್ಲಿ ಮುಂದುವರೆಯಲಿವೆ ಎಂದರು.

ಉದ್ಯಾನವನಗಳಲ್ಲಿ ಜನರು ಕುಳಿತುಕೊಳ್ಳಲು ಮತ್ತು  ವಿಹಾರ ಮಾಡಲು ಅವಕಾಶ ನೀಡುವುದಿಲ್ಲ, ಜಿಮ್ ಸಲಕರಣೆಗಳನ್ನು ಬಳಸುವಂತಿಲ್ಲ ಎಂದು ತಿಳಿಸಿದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

Related