ರಾಜ್ಯದಲ್ಲಿ ಜ. 22ರಂದು ಸಹಿತಕರ ಘಟನೆ ನಡೆದಂತೆ ನೋಡಿಕೊಳ್ಳಲು ಸೂಚನೆ: ಗೃಹ ಸಚಿವ

ರಾಜ್ಯದಲ್ಲಿ ಜ. 22ರಂದು ಸಹಿತಕರ ಘಟನೆ ನಡೆದಂತೆ ನೋಡಿಕೊಳ್ಳಲು ಸೂಚನೆ: ಗೃಹ ಸಚಿವ

ಬೆಂಗಳೂರು: ಅಯೋಧ್ಯೆಯಲ್ಲಿ ಇದೇ ಜನವರಿ 22ನೇ ತಾರೀಕಿನಂದು ರಾಮ ಮಂದಿರ ಉದ್ಘಾಟನೆಯ ದಿನದಂದು ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಕರ್ನಾಟಕ ರಾಜ್ಯದಲ್ಲೂ ಕೂಡ ಹಿಂದೂ ದೇವಾಲಯಗಳಲ್ಲಿ ಪೂಜೆ ಪುನಸ್ಕಾರ ನಡೆಯುವುದು ಸರ್ವೆ ಸಾಮಾನ್ಯ. ಆದರೆ ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕೆಂದು ಹೇಳಿದರು.

ಪೂಜೆ ಪುನಸ್ಕಾರ ನಡೆಯುತ್ತಿರುವ ಸಂದರ್ಭದಲ್ಲಿ ಯಾವುದೇ ರೀತಿ ಕಾನೂನುಬಾಹಿರ ಚಟುವಟಿಕೆ ಅವಕಾಶ ನೀಡದಂತೆ ಎಲ್ಲ ಮುನ್ನೆಚ್ಚರಿಕೆಯ ಕ್ರಮವನ್ನು ಜರುಗಿಸುವುದಾಗಿ ಈಗಾಗಲೇ ನಾವು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಹೇಳಿದರು.

 

Related