ಇಂಡಿ: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ದೇಶದ ರೈತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ದೇಶವೇ ಲಾಕ್ಡೌನ್ ಆಗಿ ಎಲ್ಲ ವರ್ಗದ ಜನರು ಬೀದಿಗೆ ಬೀಳುತ್ತಿರುವ ಈ ಸಂದರ್ಭಧಲ್ಲಿ 20 ಲಕ್ಷ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು ನಿಜಕ್ಕೂ ಶ್ಲಾಘನೀಯ ಎಂದು ಬಿಜೆಪಿ ರೈತ ಮೋರ್ಚಾ ತಾಲೂಕಾ ಅಧ್ಯಕ್ಷ ಶರಣಗೌಡ ಬಂಡಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಿಸಾನ್ ಕ್ರೆಡ್ ಕಾರ್ಡ ಮೂಲಕ ರೈತರಿಗೆ ಹೆಚ್ಚುವರಿ ಸಾಲದ ಸೌಲಭ್ಯ ಒದಗಿಸಿದ್ದಾರೆ. ನಬಾರ್ಡ ಮತ್ತು ಗ್ರಾಮೀಣ ಬ್ಯಾಂಕ್ ಹಾಗೂ ಸಹಕಾರ ಬ್ಯಾಂಕ್ಗಳ ಮುಖಾಂತರ ಸಾಲ ಸೌಲಭ್ಯ ಒದಗಿಸಿದ್ದು ರೈತರಿಗೆ ಮರು ಜೀವ ಬಂದಂತಾಗಿದೆ ಇದರಿಂದ ಸ್ವದೇಶಿ ವಸ್ತುಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಿದ್ದು ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು.