ಅನುದಾನದಲ್ಲಿ ಕರ್ನಾಟಕಕ್ಕೆ ಅನ್ಯಾಯ

ಅನುದಾನದಲ್ಲಿ ಕರ್ನಾಟಕಕ್ಕೆ ಅನ್ಯಾಯ

ತುಮಕೂರು : ಜಿಎಸ್ಟಿ ಪಾಲು ಸೇರಿ ಕೇಂದ್ರದಿಂದ ಕರ್ನಾಟಕಕ್ಕೆ ಬರಬೇಕಾದ ಅನುದಾನ ನೀಡುವಲ್ಲಿ ಅನ್ಯಾಯವಾಗಿದ್ದರೂ ಬಿಜೆಪಿ ಸಂಸದರು ಮೌನವಾಗಿರುವುದು, ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಎಂದು ಮಾಜಿ ಸಂಸದ, ಕೆಪಿಸಿಸಿ ಆರೋಗ್ಯ ಹಸ್ತ ಕಾರ್ಯಕ್ರಮದ ಅಧ್ಯಕ್ಷ ಆರ್. ಧ್ರುವನಾರಾಯಣ ಹರಿಹಾಯ್ದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಕ್ಕೆ ಜಿಎಸ್ಟಿ ಪಾಲು 13672 ಕೋಟಿ ರೂ. ಬರಬೇಕು. ಅಲ್ಲದೆ ಎನ್ಆರ್ಇಜಿಎ ಸೇರಿ ಹಲವು ಯೋಜನೆಗಳ ವ್ಯಾಚಿಂಗ್ ಗ್ರಾಂಟ್ ಬಾಕಿ ಇದೆ. ರಾಜ್ಯದವರೇ ಹಣಕಾಸು ಸಚಿವರಾಗಿದ್ದರೂ ಪ್ರಯೋಜನವಾಗಿಲ್ಲ ಎಂದರು.

Related