ಸ್ಥಳೀಯ ಸಂಸ್ಥೆಗಳಿಗೆ ನೂತನ ಆಡಳಿತ ಮಂಡಳಿಗೆ ಒತ್ತಾಯ

ಸ್ಥಳೀಯ ಸಂಸ್ಥೆಗಳಿಗೆ ನೂತನ ಆಡಳಿತ ಮಂಡಳಿಗೆ ಒತ್ತಾಯ

ಮುದ್ದೇಬಿಹಾಳ : ರಾಜ್ಯದ ಸ್ಥಳೀಯ ಸಂಸ್ಥೆಗಳ ನೂತನ ಆಡಳಿತ ಮಂಡಳಿಯನ್ನು ರಚಿಸಿ ಶೀಘ್ರದಲ್ಲಿ ಅಧಿಕಾರ ನೀಡಬೇಕೆಂದು ಆಗ್ರಹಿಸಿ ಪಟ್ಟಣದ ಪುರಸಭೆ ಸದಸ್ಯರು ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ಹುಡ್ಕೋದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿಸಿಎಂ ಅವರಿಗೆ ಸದಸ್ಯರು ಮನವಿ ಪತ್ರ ಸಲ್ಲಿಸಿದರು. ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಾರದ ಕಾರಣ ಪಟ್ಟಣಗಳಲ್ಲಿ ವಾಸಿಸುವ ನಾಗರಿಕರಿಗೆ ಸ್ಥಳೀಯ ಸಂಸ್ಥೆಗಳಿಂದ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿ ದೊರಕುತ್ತಿಲ್ಲ.

ರಾಜ್ಯಮಟ್ಟದ ಹಿರಿಯ ಅಧಿಕಾರಿಗಳ ಲೋಪದೋಷಗಳಿಂದ ಆಯ್ಕೆಯ ಪಟ್ಟಿಯಲ್ಲಿನ ದೋಷಗಳನ್ನು ಪ್ರಶ್ನಿಸಿ ಚುನಾಯಿತರಾದ ಸದಸ್ಯರುಗಳು ಪದೇ ಪದೇ ನ್ಯಾಯಾಲಯದ ಮೆಟ್ಟಿಲೇರುತ್ತಿದ್ದು ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿತನ ಇದಕ್ಕೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.

ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಆಡಳಿತ ಮಂಡಳಿಗಳ ರಚನೆಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರ ಜೊತೆಗೆ ಚರ್ಚಿಸಿ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿಯ ಆಯ್ಕೆಯ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಬಿಡುಗಡೆ ಮಾಡಬೇಕು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ರಾಜ್ಯ ಸರಕಾರ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ವಿಶೇಷ ಹಾಗೂ ತುರ್ತು ಪ್ರಕರಣದ ಅಡಿಯಲ್ಲಿ ಅರ್ಜಿ ಸಲ್ಲಿಸಿ ನ್ಯಾಯಾಲಯದಿಂದ ಇತ್ಯರ್ಥಪಡಿಸಿಕೊಂಡು ಕೂಡಲೇ ನೂತನ ಆಡಳಿತ ಮಂಡಳಿ ರಚನೆಗೆ ಮುಂದಾಗಬೇಕು .ವಿಳಂಬವಾದರೆ ಚುನಾಯಿತ ಸದಸ್ಯರು ಪ್ರತಿಭಟನೆಯ ಹಾದಿ ಹಿಡಿಯಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Related