ಚುನಾವಣಾಧಿಕಾರಿಗಳಿಂದ ಮಸ್ಟರಿಂಗ್ ಕೇಂದ್ರಗಳ ಪರಿಶೀಲನೆ

ಚುನಾವಣಾಧಿಕಾರಿಗಳಿಂದ ಮಸ್ಟರಿಂಗ್ ಕೇಂದ್ರಗಳ ಪರಿಶೀಲನೆ

ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ 3 ಲೊಕಸಭಾ ಕ್ಷೇತ್ರ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿರುವ ಮಸ್ಟರಿಂಗ್ ಕೇಂದ್ರಗಳಿಗೆ ಎಲ್ಲಾ ಮತಗಟ್ಟೆ ಅಧಿಕಾರಿಗಳು ಬಂದು ಮತಗಟ್ಟೆಗಳಿಗೆ ಅಗತ್ಯವಿರುವ ಇವಿಎಂ, ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್, ವಿವಿ ಪ್ಯಾಟ್ ಸೇರಿದಂತೆ ಎಲ್ಲಾ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ಬಿ.ಎಂ.ಟಿ.ಸಿ, ಕೆ.ಎಸ್‌.ಆರ್.ಟಿ.ಸಿ, ಇತರೆ ವಾಹನಗಳ ಮೂಲಕ ಮತಗಟ್ಟೆಗಳಿಗೆ ಪೊಲೀಸ್ ಬಂದೋಬಸ್ತ್ ಮೂಲಕ ತೆರಳಲಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲೂ ವಸತಿ, ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ‌‌ ಎಂದು ತಿಳಿಸಿದರು.

ನಾಳೆ ಏಪ್ರಿಲ್ 26ರಂದು ಬೆಳಗ್ಗೆ 7.00 ರಿಂದ ಸಂಜೆ 6.00 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದ್ದು, 7.00 ಗಂಟೆಯೊಳಗಾಗಿ ಪೂರ್ಣಗೊಳ್ಳಲಿದೆ. ಮತಗಟ್ಟೆಗಳಲ್ಲಿ ಮತದಾರರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಎಲ್ಲಾ ಮಸ್ಟರಿಂಗ್ ಕೇಂದ್ರಗಳಿಂದ ಬ್ಯಾಲೆಟ್ ಯುನಿಟ್(ಇವಿಎಂ), ಕಂಟ್ರೋಲ್ ಯುನಿಟ್(ಸಿಯು), ವಿವಿ ಪ್ಯಾಟ್ ಗಳನ್ನು ಮತಗಟ್ಟೆಗಳಿಗೆ ತಲುಪಿಸಲು ಈಗಾಗಲೇ ರೂಟ್ ಸಿದ್ದಪಡಿಸಿಕೊಳ್ಳಲಾಗಿದೆ. ಆ ಪ್ರಕಾರ ಒಂದು ಬಸ್ ನಲ್ಲಿ 5 ರಿಂದ 6 ಮಟಗಟ್ಟೆಗಳ ಅಧಿಕಾರಿಗಳು ತೆರಳಲಿದ್ದಾರೆ. ಇಂದು ಮಧ್ಯಾಹ್ನ ನಂತರ ಮತಗಟ್ಟೆಗಳಿಗೆ ತೆರಳಲಿದ್ದಾರೆ ಎಂದು ಹೇಳಿದರು.

ಪರಿಶೀಲನೆಯ ವೇಳೆ ವಲಯ ಜಂಟಿ ಆಯುಕ್ತರುಗಳಾದ ಮೊಹ್ಮದ್ ನಯೀಮ್ ಮೊಮಿನ್, ಬಾಲಶೇಖರ್, ಸಹಾಯಕ ಚುನಾವಣಾಧಿಕಾರಿಗಳಾದ ಸುರೇಶ್, ಪ್ರಮೋದ್ ಪಾಟೀಲ್, ಬಾಲಪ್ಪ ಹಂದಿಗುಂದ, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related