ಮಟ್ಕಾ ಕಂಪನಿ ಬಗ್ಗೆ ತನಿಖೆ ನಡೆಸಿ

ಮಟ್ಕಾ ಕಂಪನಿ ಬಗ್ಗೆ ತನಿಖೆ ನಡೆಸಿ

ಕೊಪ್ಪಳ ; ಶ್ರೀದೇವಿ ಮಟ್ಕಾ ಕಂಪನಿ ಬಗ್ಗೆ ಸೂಕ್ತವಾದ ತನಿಖೆ ನಡೆಸಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದರು.
ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಶ್ರೀದೇವಿ ಎನ್ನುವ ಹೆಸರಿನ ಮಟ್ಕಾ ಕಂಪನಿಜಿಲ್ಲೆಯಲ್ಲಿ ತಲೆಯೆತ್ತಿದ್ದು, ಅಕ್ರಮ ಮರಳು ದಂಧೆ ನಡೆಯುತ್ತಿರುವ ಕುರಿತು ಮಾಹಿತಿ ದೊರೆತಿದೆ.

ಪೊಲೀಸ್ ಇಲಾಖೆ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಗ್ರಾಮಗಳಲ್ಲಿ ಟೀ ಅಂಗಡಿಗಳಲ್ಲಿಯೂ ಮದ್ಯ ದೊರೆಯುತ್ತಿದ್ದು, ಇದರಿಂದ ಗ್ರಾಮದ ಯುವಕರು ಆರೋಗ್ಯ ಹಾಳಾಗುತ್ತಿದೆ. ಆದ್ದರಿಂದ ಅಕ್ರಮ ಮದ್ಯ ದಾಸ್ತಾನು ಹಾಗೂ ಅಕ್ರಮ ಮದ್ಯ ಮಾರಾಟದ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಿದರು.

Related