ಈಶ್ವರಪ್ಪ ಮನೆಯಲ್ಲಿ ಬೆಂಕಿ ಅವಘಡ

ಈಶ್ವರಪ್ಪ ಮನೆಯಲ್ಲಿ ಬೆಂಕಿ ಅವಘಡ

ಬೆಂಗಳೂರು, ಮಾ. 17 : ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ತಾಂತ್ರಿಕ ದೋಷದಿಂದ ಅಗ್ನಿ ಅವಘಡ ಸಂಭವಿಸಿದ್ದು, ಸಚಿವರು, ಅವರ ಪತ್ನಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ನಗರದ ಗಾಂಧಿ ಭವನದ ಸಮೀಪ ಇರುವ ಸಚಿವರ ಸರ್ಕಾರಿ ನಿವಾಸದಲ್ಲಿ ಸಚಿವರು ಮಲಗುವ ಕೋಣೆಯಲ್ಲಿ ಎಸಿ ಸ್ವಿಚ್ ಹಾಕುತ್ತಿದ್ದಂತೆ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಈಶ್ವರಪ್ಪ ಮತ್ತು ಅವರ ಪತ್ನಿ ಮನೆಯಿಂದ ಹೊರಗೆ ಬಂದು ಅಳಿಯ ಸಂತೋಷ್’ಗೆ ವಿಚಾರ ತಿಳಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗೂ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅದಾಗಲೇ ಈಶ್ವರಪ್ಪ ಅವರು ಮಲಗುವ ಕೋಣೆ ಸಂಪೂರ್ಣವಾಗಿ ಭಸ್ಮವಾಗಿದೆ. ರೂಮ್’ನಲ್ಲಿದ್ದ ಬೆಡ್, ಎಸಿ, ಬಟ್ಟೆಗಲು, ಸೋಫಾ, ಕರ್ಟನ್ ಎಲ್ಲವೂ ಸುಟ್ಟು ಭಸ್ಮವಾಗಿದೆ. ರಾತ್ರಿ ವೇಳೆಯೇ ದುರಸ್ತಿಗೊಳಿಸುವ ಕಾರ್ಯ ನಡೆದಿದೆ.

Related