ಕೇಂದ್ರದ ನಾಯಕರಿಗೆ ರಾಜ್ಯದ ನಾಯಕರು ಹೆದರುತ್ತಾರೆ ಎಂಬುವುದು ಸುಳ್ಳು: ಈಶ್ವರಪ್ಪ

ಕೇಂದ್ರದ ನಾಯಕರಿಗೆ ರಾಜ್ಯದ ನಾಯಕರು ಹೆದರುತ್ತಾರೆ ಎಂಬುವುದು ಸುಳ್ಳು: ಈಶ್ವರಪ್ಪ

ಹುಬ್ಬಳ್ಳಿ: ರಾಜ ಬಿಜೆಪಿಯಲ್ಲಿ ಕೆಲವು ನಾಯಕರು ಮಾತ್ರ ಅಸಮಾಧಾನಗೊಂಡಿದ್ದಾರೆ. ಒಂದೆರಡು ಜನ ಪಕ್ಷದಲ್ಲಿ ಅಸಮಾಧಾನ ಗೊಂಡರೆ, ನಮ್ಮ ಪಕ್ಷ ಕೋಟಿ ಜನರನ್ನು ಹೊಂದಿದೆ ಹಾಗಾಗಿ ನಾವು ಯಾವುದಕ್ಕೂ ಬಗ್ಗುವುದಿಲ್ಲ ಎಂದು ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ನಾಯಕರಿಗೆ ರಾಜ್ಯದ ನಾಯಕರು ಹೆದರುತ್ತಾರೆ ಎಂಬುವುದು ಸುಳ್ಳು. ರಾಜ್ಯದಲ್ಲಿ ಸಂಘಟಿತವಾಗಿರುವ ಪಕ್ಷವಾಗಿದೆ ನಮ್ಮದು ಎಂದರು.

ರಾಜ್ಯ ಬಿಜೆಪಿ ಬಗ್ಗೆ ಕೇಂದ್ರ ನಾಯಕರಿಗೆ ಬೇಸರ ಇರುವುದು ನಿಜ. ಯಾಕೆ ಬೇಸರ ಎಂದು ಕೇಳುತ್ತೇವೆ. ಕೇಂದ್ರದ ನಿಯಂತ್ರಣವಿಲ್ಲ ಎಂಬುವುದು ಸುಳ್ಳು ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದರು.

ದಲಿತರು, ಹಿಂದುಳಿದವರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಸುಳ್ಳಿಗೆ ನೋಬೆಲ್ ಪ್ರಶಸ್ತಿ ಕೊಡುವುದಿದ್ದರೆ ಇವರಿಗೆ ಕೊಡಬೇಕು. ಹಿಂದುಳಿದ, ದಲಿತರ ಬಗ್ಗೆ ಕಾಳಜಿಯಿದ್ದರೆ ಜಾತಿ ಗಣತಿ ಬಿಡುಗಡೆ ಮಾಡಬೇಕಿತ್ತು. ಬಿಡುಗಡೆಯಾಗಬೇಕು ಎಂಬುವುದು ಪಕ್ಷದ ನಿಲುವಾಗಿದೆ ಎಂದರು.

 

Related