ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ..!

 ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ..!

ರಾಮನಗರ, ಆಗಸ್ಟ್5: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ನಾನು ಘೋಷಣೆ ಮಾಡಿರುವಂತೆ ಪಂಚ ರತ್ನ ಯೋಜನೆಗಳಲ್ಲಿ ಒಂದಾದ ವಸತಿ ಯೋಜನೆ ಮೂಲಕ ವಸತಿ ರಹಿತರಿಗೆ ಸೂರು ಒದಗಿಸುವುದು ನನ್ನ ಕನಸು. ನಿಮ್ಮ ಆಶೀರ್ವಾದ ಬಲದಿಂದ ನಾನದನ್ನು ಸಾಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದರು.

ತಾಲ್ಲೂಕಿನ ಕೂಡ್ಲೂರು ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ, ವಸತಿ ಇಲಾಖೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಜೀವ್ಗಾಂಧಿ ವಸತಿ ನಿಗಮ ನಿಯಮಿತ ಹಾಗೂ ಮುಖ್ಯಮಂತ್ರಿಗಳ ವಸತಿ ಯೋಜನೆಗಳ ವತಿಯಿಂದ ಎರಡನೇ ಹಂತದಲ್ಲಿ 112 ಮಂದಿ ವಸತಿ ರಹಿತರಿಗೆ ಹಕ್ಕು ಪತ್ರ ವಿತರಣೆ ಮಾಡಿದ ನಂತರ ಮಾತನಾಡಿದ ಮಾಜಿ ಸಿಎಂ ಎಚ್ಡಿಕೆ 2023ಕ್ಕೆ ಜನತಾ ದಳ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.

Related