ಸಂಚಲನ ಸೃಷ್ಟಿಸಿದ ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸ!

ಸಂಚಲನ ಸೃಷ್ಟಿಸಿದ ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸ!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದ ಜಗದೀಶ್ ಶೆಟ್ಟರ ದೆಹಲಿ ಪ್ರವಾಸ. ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸೋತ್ತಿದ್ದಾರೆ.

ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತದೆ. ಆದ್ದರಿಂದ ಮತ್ತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಪಕ್ಷ ಸೇರ್ತಾರೆ ಎಂಬ ಮಾಹಿತಿ ದೊರೆತಿದೆ.

ಹೌದು, ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ತೊರೆದು ಮತ್ತೆ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ಸುದ್ದಿ ಈಗಾಗಲೇ ಹರಿದಾಡುತ್ತಿದ್ದು, ಇಂದು ಸಂಜೆ ಇದರ ಬಗ್ಗೆ ನಿಖರ ಮಾಹಿತಿ ದೊರೆಯಲಿದೆ ಎಂದು ತಿಳಿದುಬಂದಿದೆ.

ಇನ್ನು ಜಗದೀಶ್ ಶೆಟ್ಟರನ್ನು ಮಾನ ಒಲಿಸಲು ಮುಂದಾಗಿರುವ ಬಿಜೆಪಿ ಹೈಕಮಾಂಡ್ ನಾಯಕರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಬೇಕೆಂದು ಈಗಾಗಲೇ ಚರ್ಚೆ ಮಾಡಿದ್ದಾರೆಂದು ತಿಳಿದು ಬಂದಿದೆ.

ಅಲ್ಲದೆ, ಶೆಟ್ಟರ್ ಜೊತೆ ಮಾತುಕತೆ ನಡೆಸುವ ಹೊಣೆಗಾರಿಕೆಯನ್ನು ರಾಜ್ಯದ ನಾಯಕರು ವರಿಷ್ಠರ ಮೇಲೆ ಹಾಕಿದ್ದು, ಖುದ್ದು ಅಮಿತ್ ಶಾ ಅವರೇ ಅಖಾಡಕ್ಕಿಳಿದಿದ್ದಾರೆ. ಶೆಟ್ಟರ್ ಜೊತೆ ಬಿಜೆಪಿ ತೊರೆದು ಕಾಂಗ್ರೆಸ್​ ಸೆರ್ಪಡೆಯಾಗಿ ಶಾಸಕರಾಗಿರುವ ಲಕ್ಷ್ಮಣ ಸವದಿ ಕೂಡ ಪಕ್ಷಕ್ಕೆ ವಾಪಸ್ ಆಗುವ ನಿರೀಕ್ಷೆ ಹೊಂದಲಾಗಿದೆ.

 

Related