ಕೇಂದ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಬಿರುಗಾಳಿ ಎಬ್ಬಿಸುತ್ತಿದ್ದಾರೆ ಎಂಬ ಭಯ ಜೋಶಿಗೆ ಇದೆ: ಶರಣಪ್ರಕಾಶ

ಕೇಂದ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಬಿರುಗಾಳಿ ಎಬ್ಬಿಸುತ್ತಿದ್ದಾರೆ ಎಂಬ ಭಯ ಜೋಶಿಗೆ ಇದೆ: ಶರಣಪ್ರಕಾಶ

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂಡಿಯಾ ಮೈತ್ರಿ ಕೂಟಕ್ಕೆ ಅಧ್ಯಕ್ಷರನ್ನ ಮಾಡುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೇಳಿಕೆಗೆ ಶರಣಪ್ರಕಾಶ್ ಪಾಟೀಲ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಯವರು ದೇಶದಲ್ಲಿ ಬಿರುಗಾಳಿ ಎಬ್ಬಿಸುತ್ತಾರೆ ಎಂಬ ಭಯ ಬಿಜೆಪಿ ಪಕ್ಷದಲ್ಲಿ ಈಗಾಗಲೇ ಶುರುವಾಗಿದೆ. ಆದ್ದರಿಂದ ಈ ತರಹದ ಹೇಳಿಕೆಗಳನ್ನು ಹೇಳುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ.

ಇಂಡಿಯಾ ಒಕ್ಕೂಟ ಸಾಮಾನ್ಯ ಸಂಘಟನೆಯಲ್ಲ. ಜನವಿರೋಧಿ ನೀತಿ ವಿರುದ್ದ ರಾಷ್ಟ್ರ ಮಟ್ಟದಲ್ಲಿ ರೂಪಿಸಿರುವ ಒಕ್ಕೂಟ ಇದು. ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದು ಕನ್ನಡಿಗರು ಹೆಮ್ಮೆ ಪಡುವ ವಿಚಾರ ಎಂದು ಹೇಳಿದ್ದಾರೆ.

 

Related