ತೆಲಂಗಾಣ ರೇವಂತ್ ರೆಡ್ಡಿ ಪ್ರಮಾಣವಚನಕ್ಕೆ ಕರ್ನಾಟಕದ ಡಿಸಿಎಂ ಬಾಗಿ

ತೆಲಂಗಾಣ ರೇವಂತ್ ರೆಡ್ಡಿ ಪ್ರಮಾಣವಚನಕ್ಕೆ ಕರ್ನಾಟಕದ ಡಿಸಿಎಂ ಬಾಗಿ

ಬೆಂಗಳೂರು: ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಅಧಿಕಾರದ ಗದ್ದುಗೆಯನ್ನು ಏರಿದ್ದು, ಇಂದು ಕಾಂಗ್ರೆಸ್ ಪಕ್ಷದಿಂದ ನೂತನವಾಗಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ರೇವಂತ್ ರೆಡ್ಡಿ ಅವರ ಪ್ರಮಾಣವಚನ ಸ್ವೀಕಾರಕ್ಕಾಗಿ (ಡಿ.07 ಗುರುವಾರ) ಇಂದು ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮತ್ತು ಕಾಂಗ್ರೆಸ್ ನ ನಾಯಕರುಗಳು ತೆಲಂಗಾಣಕ್ಕೆ ತೆರಳಿದ್ದಾರೆ.

ಹೌದು, ತೆಲಂಗಾಣ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನಿಂದ ಹೈದರಾಬಾದ್ ಗೆ ವಿಶೇಷ ವಿಮಾನದಲ್ಲಿ ಗುರುವಾರ ತೆರಳಿದರು.

ಶಾಸಕರಾದ ರಂಗನಾಥ್, ಶರತ್ ಬಚ್ಚೇಗೌಡ, ಶ್ರೀನಿವಾಸ್, ಶಿವಣ್ಣ, ಇಕ್ಬಾಲ್ ಹುಸೇನ್ ತೆಲಂಗಾಣಕ್ಕೆ ಪ್ರಯಾಣ ಬೆಳೆಸಿದ್ದು, ವಿಶೇಷ ವಿಮಾನದ ಮೂಲಕ ತೆರಳಿದ ರಾಜ್ಯ ಕಾಂಗ್ರೆಸ್ ಶಾಸಕರು ತೆಲಂಗಾಣಕ್ಕೆ ತೆರಳಿದ್ದಾರೆ.

Related