ಅಯೋಧ್ಯ ಶ್ರೀರಾಮ ಮಂದಿರದ ಕರಸೇವಕ ನನ್ನನ್ನೂ ಬಂಧಿಸಿ: ಸಿಟಿ ರವಿ

ಅಯೋಧ್ಯ ಶ್ರೀರಾಮ ಮಂದಿರದ ಕರಸೇವಕ ನನ್ನನ್ನೂ ಬಂಧಿಸಿ: ಸಿಟಿ ರವಿ

ಬೆಂಗಳೂರು: ಹುಬ್ಬಳ್ಳಿಯ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ನಿನ್ನೆಯಿಂದ ರಾಜ್ಯದಾದ್ಯಂತ ಬಿಜೆಪಿ ಮುಖಂಡರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಇಂದು ಕೂಡ ಬೆಂಗಳೂರು ನಗರದಲ್ಲಿ ಬಿಜೆಪಿ ನಾಯಕರುಗಳ ಶ್ರೀರಾಮನಿರುವ ಪೋಸ್ಟರ್ ಹಿಡಿದು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ಹೌದು, ಇಂದು ಕೂಡ ಬೆಂಗಳೂರು ನಗರದಲ್ಲಿ ಬಿಜೆಪಿ ಮುಖಂಡರುಗಳೆಲ್ಲ ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಬಿಜೆಪಿಯ ಶಾಸಕ ಸಿಟಿ ರವಿ ಅವರು ಪ್ರತಿಭಟನೆಯಲ್ಲಿ ಭಾಗಿಯಾಗಿ ರಾಮನಿರುವ ಪೋಸ್ಟರ್ ಅನ್ನು ಹಿಡಿದು, ನಾನು ಕೂಡ ರಾಮಭಕ್ತ ನನ್ನನ್ನು ಬಂಧಿಸಿ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಅವರು ಕೂಡ ಇದೇ ರೀತಿ ಪ್ರತಿಭಟನೆ ಮಾಡಿದ್ದರು. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು, ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್‌ ಹಿಡಿದು ಏಕಾಂಗಿ ಪ್ರತಿಭಟನೆ ನಡೆಸುವ ಮೂಲಕ ಚಾಲನೆ ನೀಡಿದರು. ಹಾಗೆ ಅದೇ ರೀತಿ ಈಗ ಸಿ.ಟಿ.ರವಿ ಅವರು ಕೂಡ ಅಭಿಯಾನ ಆರಂಭಿಸಿದ್ದಾರೆ.

Related