ಪತ್ನಿಯನ್ನುಕೊಂದು : ಆತ್ಮಹತ್ಯೆಗೆ ಶರಣು

ಪತ್ನಿಯನ್ನುಕೊಂದು : ಆತ್ಮಹತ್ಯೆಗೆ ಶರಣು

ವಿಜಯಪುರ : ಕೌಟುಂಬಿಕ ಕಲಹದಿಂದಿ ಪತ್ನಿಯನ್ನು ಕೊಲೆ ಮಾಡಿ, ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಗರ ಹೊರ ವಲಯದ ತೊರವಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರನ್ನು ಸಂತೋಷ ರಾಮಚಂದ್ರ ಈಟಿ, ಶ್ರೀದೇವಿ ಸಂತೋಷ ಈಟಿ ದಂಪತಿಗಳು ಎಂದು ಗುರುತಿಸಲಾಗಿದೆ. ಸಂತೋಷ ಈಟಿ ಈತನು, ಕೌಟುಂಬಿಕ ಕಲಹದ ಹಿನ್ನೆಲೆ ಮದ್ಯದ ಅಮಲಿನಲ್ಲಿ ತನ್ನ ಹೆಂಡತಿ ಶ್ರೀದೇವಿಯನ್ನು ಕೊಲೆ ಮಾಡಿ, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮೀಣ ಠಾಣೆಯ ಪಿಎಸ್ ಐ ಉಪ್ಪಾರ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related