ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ಹುಳಿಮಾವು ಗ್ರಾಮದ ಸುಪ್ರಸಿದ್ದ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿಐತಿಹಾಸಿಕ ಬ್ರಹ್ಮ ರಥೋತ್ಸವಕ್ಕೆ ಬಿಜೆಪಿ ಮುಖಂಡ ಹಾಗೂ ದೇವಸ್ಥಾನದ ಟ್ರಸ್ಟಿಯಾದ ಮುತ್ತಪ್ಪರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾವಿರಾರು ಭಕ್ತಾದಿಗಳು ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡು ಕೋದಂಡರಾಮಸ್ವಾಮಿಯ ದರ್ಶನ ಪಡೆದರು.