ಬೆಂಗಳೂರು: ಇಂದು ಕರ್ನಾಟಕ ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ಬೆಂಗಳೂರಿನಲ್ಲಿರುವ ಕೃಪಾನಿಧಿ ಪಿಯುಸಿ ಕಾಲೇಜಿನಲ್ಲಿ ಸುಮಾರು 425 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದು 95% ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಲಿತಾಂಶ ಪಡೆದಿರುವುದರಿಂದ ಕಾಲೇಜಿನ ಚೇರ್ಮೆನ್ ಹಾಗೂ ಪ್ರೋಪೆಸರ್ ಡಾ. ಸುರೇಶ್ ನಾಗಪಾಲ್ ರವರಿಂದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಗುರುಕುಲ ಪದ್ದತಿಯಲ್ಲಿ ವಿದ್ಯಾಭ್ಯಾಸ ನೀಡಲಾಗುತ್ತಿದೆ.
ಇನ್ನು ಈ ಕಾಲೇಜಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸುಮಾರು 95% ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, 425 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತಿರ್ಣರಾಗಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಆಸಿಫಾ, ಮತ್ತು ಕೃಪಾನಿಧಿ ಕಾಲೇಜಿನ ಸಿಬ್ಬಂದಿಗಳು ಸೇರಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸಿಹಿ ತಿನಿಸಿ ಹೂಗುಚ್ಚ ನೀಡುವ ಮೂಲಕ ಅಭಿನಂದನೆ ಸಲ್ಲಿಸಿದರು.
ಕೃಪಾನಿದಿ ಕಾಲೇಜು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು
- ಅಸ್ಮೀನ್ ತಾಜ್ PCMC 588
- ನಿಖಿತ.ಇ, CEBA 587
- ಪ್ರಿಯಾಂಕ.ಎಸ್, CEBA 587
- ಪುನಿತ್.ಎಂ, PCMC 587
- ನಿತ್ಯ ಶ್ರೀ. ಎಂ, CEBA 585
- ದೀಪಿಕಾ ಮಿಶ್ರಾ, SEBA 584
- ಎನ್. ಜಾನವಿ, SEBA 584
- ಆರ್. ರಾಜನ್, SEBA 584