ಕುಲಕರ್ಣಿ ಜಾಮೀನು ಅರ್ಜಿ ಮುಂದೂಡಿಕೆ

ಕುಲಕರ್ಣಿ ಜಾಮೀನು ಅರ್ಜಿ ಮುಂದೂಡಿಕೆ

ಧಾರವಾಡ :   ಜಿ.ಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಧಾರವಾಡ ಹೆಚ್ಚುವರಿ ಜಿಲ್ಲಾ ಸೆಷನ್ ನ್ಯಾಯಾಲಯ ನ.18ಕ್ಕೆ ಮುಂದೂಡಿದೆ.

ಸಿಬಿಐನಿಂದ ಧಾರವಾಡ ಜಿ.ಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ನ.23ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಾಲಯ ಜಾಮೀನು ಅರ್ಜಿಯ ವಿಚಾರಣೆಯನ್ನು ನ.18ಕ್ಕೆ ಮುಂದೂಡಿದೆ. ಹೀಗಾಗಿ ಸದ್ಯಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲಿನಿಂದ ಬಿಡುಗಡೆ ಭಾಗ್ಯವಿಲ್ಲದಂತೆ ಆಗಿದೆ.

Related