ಭೂಕುಸಿತ, 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಭೂಕುಸಿತ, 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಭಾರೀ ಭೂಕುಸಿತ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ 40ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ಇದೆ ಎಂದು ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ಅವರು ತಿಳಿಸಿದ್ದಾರೆ.

ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ(ಎಚ್ಆರ್ಟಿಸಿ) ಬಸ್ ಸೇರಿದಂತೆ ಹಲವು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ ಎಂದು ಹೇಳಿದ್ದಾರೆ. ಬಸ್ ಕಿನ್ನೌರಿನ ರೆಕಾಂಗ್ ಪಿಯೊದಿಂದ ಶಿಮ್ಲಾಕ್ಕೆ ಹೋಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಸ್ಥಳಕ್ಕೆ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಮತ್ತು ಸ್ಥಳೀಯ ರಕ್ಷಣಾ ತಂಡಗಳು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಿನ್ನೌರ್ ಉಪ ಆಯುಕ್ತರು ತಿಳಿಸಿದ್ದಾರೆ.

Related