ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ: ಡಿಕೆಶಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ: ಡಿಕೆಶಿ

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ರಾಜಕೀಯದಲ್ಲಿ ಆಡಳಿತ ಪಕ್ಷದ ಮೇಲೆ ವಿರೋಧ ಪಕ್ಷದ ನಾಯಕರುಗಳು ಒಂದಲ್ಲ ಒಂದು ರೀತಿ ಆರೋಪ ಮಾಡುತ್ತಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದಷ್ಟು ಈ ದೇಶದ ಯಾವ ರಾಜ್ಯದಲ್ಲೂ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಹುಬ್ಬಳ್ಳಿ ಕೊಲೆ ಪ್ರಕರಣಕ್ಕೆ ಕಾರಣ ಎನ್ನುವ ಬಿಜೆಪಿ ಆರೋಪದ ಬಗ್ಗೆ ಅವರು ಉತ್ತರಿ ನೀಡಿದರು.

ರಾಜ್ಯಪಾಲರ ಆಡಳಿತ ಹೇರಲು ಈ ರೀತಿಯ ನಾಟಕ ಹಾಗು ಹುನ್ನಾರವನ್ನು ವಿಪಕ್ಷ ನಾಯಕ ಆರ್. ಅಶೋಕ ಮತ್ತು ಬಿಜೆಪಿಯವರು ಮಾಡುತ್ತಿದ್ದಾರೆ. ಈ ರೀತಿ ಆಗಲು ನಾವು ಬಿಡುವುದಿಲ್ಲ. ನಿಷ್ಪಕ್ಷಪಾತವಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

 

Related