ಶಾಸಕರು-ಮಾಜಿ ಸಚಿವರ ಸ್ಪರ್ಧೆ!

ಶಾಸಕರು-ಮಾಜಿ ಸಚಿವರ ಸ್ಪರ್ಧೆ!

ಬಾಗಲಕೋಟೆ : ಸಹಕಾರ ವಲಯದ ಹಿರಿಯಣ್ಣ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಚುನಾವಣೆ ಅತ್ಯಂತ ಪ್ರತಿಷ್ಠೆಯ ಕಣವಾಗಿದ್ದು, ಇಬ್ಬರು ಹಾಲಿ ಶಾಸಕರು, ಇಬ್ಬರು ಎಂಎಲ್‌ಸಿಗಳು ಹಾಗೂ ಮೂವರು ಮಾಜಿ ಸಚಿವರು ಕಣದಲ್ಲಿದ್ದಾರೆ.

ಪ್ರಸಕ್ತ ಚುನಾವಣೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ನ ಮಾಜಿ ಸಚಿವ ಎಸ್‌ಆರ್ ಪಾಟೀಲ, ಕಾಂಗ್ರೆಸ್ ಶಾಸಕ ಆನಂದ ನ್ಯಾಮಗೌಡ, ಬಿಜೆಪಿಯ ಶಾಸಕ ಸಿದ್ದು ಸವದಿ, ಎಂಎಲ್‌ಸಿ ಹನಮಂತ ನಿರಾಣಿ, ಕಾಂಗ್ರೆಸ್‌ನ ಮಾಜಿ ಸಚಿವರಾದ ಎಚ್.ವೈ.ಮೇಟಿ, ಅಜಯಕುಮಾರ ಸರನಾಯಕ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸ್ಪರ್ಧಿಸಿದ್ದಾರೆ. ಹೀಗಾಗಿ ಪ್ರತಿ ಬಾರಿಗಿಂತಲೂ ಈ ಬಾರಿ ಸಹಕಾರ ಬ್ಯಾಂಕ್ ಚುನಾವಣೆ ಪ್ರತಿಷ್ಠೆ ಹಾಗೂ ತುರುಸಿನಿಂದ ನಡೆಯುತ್ತಿದೆ.

ಪರಿಷತ್‌ನ ವಿರೋಧ ಪಕ್ಷದ ನಾಯಕರೂ ಆಗಿರುವ ಎಸ್.ಆರ್. ಪಾಟೀಲ ಬೀಳಗಿ ತಾಲೂಕಿನ ಪಿಕೆಪಿಎಸ್ ಕ್ಷೇತ್ರದಿಂದ ಮೂರನೇ ಬಾರಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಶಾಸಕ ಆನಂದ ನ್ಯಾಮಗೌಡರು ಜಮಖಂಡಿ ಪಿಕೆಪಿಎಸ್ ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ.

 

Related