ಶಾಸಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಫಿಕ್ಸ್

ಶಾಸಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಫಿಕ್ಸ್

ಬೆಳಗಾವಿ : ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರ ಸಚಿವ ಸಂಪುಟ ನಾಳೆ ಮತ್ತೆ ವಿಸ್ತರಣೆಯಾಗಲಿದೆ. ನೂತನ ಸಚಿವರಾಗಿ 7 ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣ ವಚನಕ್ಕೂ ಮುಹೂರ್ತ ಫಿಕ್ಸ್ ಆಗಿದೆ.

ಮಧ್ಯೆ ನಾಳೆ ನಡೆಯುವಂತ ಸಂಪುಟ ವಿಸ್ತರಣೆಗೂ ಮುನ್ನಾ ಬೆಳಗಾವಿಯಲ್ಲಿರುವಂತ ಶಾಸಕ ಉಮೇಶ್ ಕತ್ತಿಗೆ ಸಿಎಂ ಯಡಿಯೂರಪ್ಪ ಬೆಂಗಳೂರಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ಹೀಗಾಗಿ ಬೆಳಗಾವಿಯಿಂದ ಬೆಂಗಳೂರಿನತ್ತ ಶಾಸಕ ಉಮೇಶ್ ಕತ್ತಿ ಹೊರಟಿದ್ದಾರೆ. ಈ ಮೂಲಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಫಿಕ್ಸ್ ಎಂಬಂತೆ  ಆಗಿದೆ.

ಅಂತೂ ಇಂತೂ ರಾಜ್ಯದ ಜನರು ಹಾಗೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಂತವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ನೀಡಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ

ಇದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಶಾಸಕ ಉಮೇಶ್ ಕತ್ತಿಗೆ ಬೆಳಗಾವಿಯಿಂದ ಬೆಂಗಳೂರಿಗೆ ಹೊರಟು ಬರುವಂತೆ ಬುಲಾವ್ ನೀಡಿದ್ದಾರೆ.
ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರು ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದು, ಅಲ್ಲಿಯವರೆಗೆ ಕಾದು ನೋಡಬೇಕಿದೆ.

Related