ಕೊರೋನಾ ವಿರುದ್ಧ ಜೀವನ

ಕೊರೋನಾ ವಿರುದ್ಧ ಜೀವನ

ಕೊಟ್ಟೂರು: ಪಂಚಾಯಿತಿ ಪೌರ ಕಾರ್ಮಿಕರು ಹಾಗೂ ಕಚೇರಿ ಸಿಬ್ಬಂದಿ ವರ್ಗದವರಿಗೆ ಕೊವೀಡ್ 19 ತಪಾಸಣೆ ಹಾಗೂ ಗಂಟಲು ದ್ರವ ಪರೀಕ್ಷೆ ಮಾಡಲಾಯಿತು.
ಕೊರೋನಾ ತಪಾಸಣೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಟಿ. ಗಿರೀಶ್ ಅವರು, 50 ಪೌರಕರ್ಮಿಕರು ಹಾಗೂ ಕಚೇರಿ ಸಿಬ್ಬಂದಿ ವರ್ಗದವರ ಗಂಟಲು ದ್ರವವನ್ನು ಕೋವಿಡ್ 19 ಬಳ್ಳಾರಿ ಆಸ್ಪತ್ರೆಗೆ ಕಳುಹಿಸಲಾಗುವುದು.
ಕೊರೋನಾ ವಿರುದ್ಧ ಪ್ರತಿ ನಿತ್ಯ ಜೀವದ ಹಂಗು ತೊರೆದು ಹಗಲಿರುಳು ಸೇವೆ ಸಲ್ಲಿಸುತ್ತಿರುವ ಪೌರಕರ್ಮಿಕರು ಹಾಗೂ ಸಿಬ್ಬಂದಿ ವರ್ಗದವರ ಆರೋಗ್ಯ ಉತ್ತಮವಾಗಿ ಇರಬೇಕು ಎಂಬ ಉದ್ದೇಶದಿಂದ ತಪಾಸಣೆ ನಡೆಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ನಿರೀಕ್ಷಕಿ ಕೆ. ಅನುಷಾ, ಮಹಿಳಾ ಸಂಯೋಜಕಿ ಶೀಲಾ, ಸಂಯೋಜಕ ಚಂದ್ರಶೇಖರ್, ಮಲ್ಲಿಕಾರ್ಜುನ , ಬಾಷಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Related