ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಯತ್ನಾಳ್​

ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಯತ್ನಾಳ್​

ವಿಜಯಪುರ: ಬಿಜೆಪಿ ಶಾಸಕ ಬಸವರಾಜ್ ಯತ್ನಾಳ್ ಅವರು ಸ್ವಪಕ್ಷದ ಮೇಲೆ ಈಗಾಗಲೇ ಆರೋಪಗಳ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಬಸವರಾಜ್ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರನ್ನು ಶಕುನಿ ಎಂದು ಹೇಳಿದ್ದಾರೆ.

ಹೌದು ಬಿಜೆಪಿ ನಾಯಕರುಗಳ ವಿರುದ್ಧನೆ, ಬಿಜೆಪಿಯ ಶಾಸಕ ಬಸವರಾಜ್ ಯತ್ನಾಳ್ ಅವರು ಈಗಾಗಲೇ ಕಿಡಿ ಕಾರುತ್ತಿದ್ದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಮತ್ತೆ ಗುಡುಗಿದ್ದಾರೆ.

ಬಿಜೆಪಿ ಪಕ್ಷದಲ್ಲಿ ಬಿಎಸ್​ ಯಡಿಯೂರಪ್ಪ ಶಕುನಿ ಇದ್ದ ಹಾಗೆ. ಅವರು ಏನು ಹೇಳುತ್ತಾರೆ ಅದು ಉಲ್ಟಾ ನಡೆದಿರುತ್ತದೆ. ಈ ಹಿಂದೆ ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷೆಯಾಗಲಿ ಎಂದಿದ್ದರು. ಬಸನಗೌಡ ಪಾಟೀಲ್​ ಯತ್ನಾಳ್ ಅವರು ವಿಪಕ್ಷ ನಾಯಕರಾಗಲು ನಮ್ಮ ಅಭ್ಯಂತರವಿಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದರು. ಅಷ್ಟರಲ್ಲಿ ಹೈಕಮಾಂಡ್​ನಲ್ಲಿ ಎಲ್ಲಾ ಪ್ಯಾಕ್ ಮಾಡಿಕೊಂಡು ಬಂದಿದ್ದರು. ಬಿಎಸ್​ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದರೂ ಅವರದ್ದು ಏನೂ ನಡೆಯುತ್ತಿಲ್ಲ. ಮರ್ಯಾದೆ ಹೋಗಬಾರದು ಎಂದು ದೂರು ನೀಡಿಲ್ಲ ಅಂತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್​ ಮೂರನೇ ಟಿಪ್ಪು ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ವಿಚಾರವಾಗಿ ನಾನು ಮೂರನೇ ಟಿಪ್ಪು ಆದರೆ ಎಂ.ಬಿ.ಪಾಟೀಲ್ ನಾಲ್ಕನೇ ಟಿಪ್ಪು ಸುಲ್ತಾನ್ ಎಂದು ಟಾಂಗ್​ ಕೊಟ್ಟರು.

 

Related