ಸಾಹಿತಿ ಗೀತಾ ನಾಗಭೂಷಣ ವಿಧಿವಶ

ಸಾಹಿತಿ ಗೀತಾ ನಾಗಭೂಷಣ ವಿಧಿವಶ

ಬೆಂಗಳೂರು : ಹಿರಿಯ ಸಾಹಿತಿ ಗೀತಾ ನಾಗಭೂಷಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಗೀತಾ ನಾಗಭೂಷಣ ಅವರು ಕಾದಂಬರಿ, ಕಥೆ, ಕವಿತೆ, ಸಂಶೋಧನೆ ಹೀಗೆ ವಿವಿಧ ಪ್ರಕಾರಗಳಲ್ಲಿ ತಮ್ಮ ಛಾಪು ಮೂಡಿಸಿದವರು . ಅವರ ಕಾದಂಬರಿಗಳಲ್ಲಿನ ಹೆಣ್ಣಿನ ಬದುಕಿನ ಚಿತ್ರಣಗಳು ವಾಸ್ತವತೆಯನ್ನು ಬಿಂಬಿಸುತ್ತಿದ್ದವು.

ಕಲ್ಯಾಣ ಕರ್ನಾಟಕದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಬೆಳೆದ ಗೀತಾ ನಾಗಭೂಷಣ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ನಾಡೋಜ ಪದವಿ ಪಡೆದ ರಾಜ್ಯದ ಮೊದಲ ಮಹಿಳೆ ಎಂದು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಬಂಧುವರ್ಗ, ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ  ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Related