ಮಳೆಗೆ ಜನಜೀವನ ಅಸ್ತವ್ಯಸ್ತ

ಮಳೆಗೆ ಜನಜೀವನ ಅಸ್ತವ್ಯಸ್ತ

ಮುಂಡಗೋಡ : ತಾಲೂಕಿನಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿ ಸಂಭವಿಸಿದೆ.

ಕೆಲ ಮನೆಗಳಿಗೆ ನೀರು ನುಗ್ಗಿ ನೀರನ್ನು ಹೊರ ಹಾಕಲು ಪರದಾಡಿದ ಪ್ರಸಂಗ ನಡೆಯಿತು. ಬಹುತೇಕ ಕಡೆಗಳಲ್ಲಿ ರಸ್ತೆ ಸೇತುವೆಗಳು ಜಲಾವೃತಗೊಂಡು ವಾಹನ ಸವಾರರು ತೊಂದರೆ ಅನುಭವಿಸಿದರು. ಬತ್ತದ ಗದ್ದೆಗಳಲ್ಲಿ ನೀರು ನಿಂತು ಸಂಪೂರ್ಣ ಜಲಾವೃತಗೊಂಡಿವೆ.
ಪಟ್ಟಣದ ಹೊರ ವಲಯ ಶಿರಸಿ ರಸ್ತೆಯಲ್ಲಿರುವ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಕಾಲುವೆ ಮಣ್ಣು ಕುಸಿದು ನೀರುಕೊಚ್ಚಿ ಹರಿದು ತೀವ್ರ ಭಯ ಸೃಷ್ಟಿಸಿತು.

ತಾಲೂಕಿನ ಪಾಳಾ ಗ್ರಾಮದ ಮಮತಾ ನಾಗೇಂದ್ರ ಆಡೂರ ಎಂಬುವವರ ಮನೆ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಮರಗಡಿಗ್ರಾಮದ ಫಕ್ಕೀರಪ್ಪ ವಡ್ಡರ ಇವರ ಮನೆಯ ಕುಸಿದು ತೀವ್ರ ಹಾನಿ ಸಂಭವಿಸಿದರೆ, ಆಲಳ್ಳಿ ಗ್ರಾಮದ ಬಾಬುಸಾಬ ಭಾವಿಕಟ್ಟಿ ಎಂಬುವವರ ಮನೆ ಮೇಲೆ ಮರ ಬಿದ್ದು ಮೇಲ್ಚಾವಣಿಗೆ ತೀವ್ರ ಹಾನಿಯಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ಕ್ರಮಕೈಗೊಂಡಿದ್ದಾರೆ.

Related