ʼಲೋಕʼ ಜೆಡಿಎಸ್-ಬಿಜೆಪಿ ಅಣ್ಣತಮ್ಮಂದಿರಂತೆ ಕೆಲಸ ಮಾಡುತ್ತೇವೆ: ನಿಖಿಲ್

ʼಲೋಕʼ ಜೆಡಿಎಸ್-ಬಿಜೆಪಿ ಅಣ್ಣತಮ್ಮಂದಿರಂತೆ ಕೆಲಸ ಮಾಡುತ್ತೇವೆ: ನಿಖಿಲ್

ಬೆಂಗಳೂರು:  ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದು ಒಳ್ಳೆಯ ಉದ್ದೇಶದಿಂದ ಹೊರತಾಗಿ ಬೇರೆ ಯಾವ ದೇಶದಿಂದ ನಾವು ಮೈತ್ರಿ ಮಾಡಿಕೊಂಡಿಲ್ಲ ಎಂದು ಜೆಡಿಎಸ್ ನ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿ ಎಲ್ಲಿ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ 2 ಮೈತ್ರಿ ಮಾಡಿಕೊಂಡಿರುವುದರಿಂದ ನಾವು ಎಲ್ಲಾ ಕ್ಷೇತ್ರದಲ್ಲೂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಇನ್ನು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಕ್ಕೆ 28 ಕ್ಷೇತ್ರವನ್ನು ಗೆಲ್ಲುವ ಭರವಸೆಯನ್ನು ನಾವು ಹೊಂದಿದ್ದೇವೆ ಹಾಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಜೆಡಿಎಸ್​​ಗೆ ಎಷ್ಟು ಕ್ಷೇತ್ರ ಸಿಗಲಿದೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ತಿಂಗಳು ಕುಮಾರಸ್ವಾಮಿ ಹಾಗೂ ನಮ್ಮ ನಾಯಕರು ದೆಹಲಿಗೆ ಹೋಗ್ತಾರೆ. ಅದಕ್ಕೆ ಒಂದು ದಿನಾಂಕ‌ ನಿಗದಿಯಾಗುತ್ತದೆ. ಅತೀ ಶೀಘ್ರದಲ್ಲಿ ನಿಮ್ಮೆಲ್ಲರಿಗೂ ಸಿಹಿ ಸುದ್ದಿ ಕೊಡ್ತಿವಿ ಎಂದು ಹೇಳಿದ್ದಾರೆ.

ನಮಗೆ ಸಿಗುವ ಸ್ಥಾನಗಳಲ್ಲಿ ಎಲ್ಲಾ ಗೆಲ್ಲಬೇಕು. ದೇವೇಗೌಡರು ತೆಗದುಕೊಂಡ ಎನ್​ಡಿಎ ಜೊತೆಗಿನ ಮೈತ್ರಿ ಒಳ್ಳೆಯ ಉದ್ದೇಶದಿಂದ ತೆಗದುಕೊಂಡಿರುವ ನಿರ್ಧಾರ. ಪ್ರಧಾನಿ ನರೇಂದ್ರ ಮೋದಿಯವರು ದೇವೇಗೌಡರಿಗೆ ಕೊಡುವ ಗೌರವವನ್ನ ನಾವೆಲ್ಲಾ ಕಂಡಿದ್ದೇವೆ. ನಮ್ಮನ್ನ ಅತ್ಯಂತ ಗೌರವದಿಂದ ನಡೆಸಿಕೊಂಡಿದ್ದಾರೆ. ಹಾಗಾಗಿ ಒಳ್ಳೆಯ ಉದ್ದೇಶದಿಂದ ಬಿಜೆಪಿ ಜೊತೆ ಕೈ ಜೋಡಿಸಿದ್ದೇವೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

Related