ಮಾ. 31ರವರೆಗೆ ಕಾಲುವೆಗೆ ನೀರು ; ಶಾಸಕ ರಾಜುಗೌಡ

ಮಾ. 31ರವರೆಗೆ ಕಾಲುವೆಗೆ ನೀರು ; ಶಾಸಕ ರಾಜುಗೌಡ

ಸುರಪುರ : ನಾರಾಯಣಪುರ ಎಡದಂಡೆ ಮತ್ತು ಬಲದಂಡೆ ಕಾಲುವೆಯಿಂದ ಮಾ. 31 ರವರೆಗೆ ನೀರು ಹರಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಹಿಂದೆ ಮಾರ್ಚ್ 22 ರವರೆಗೆ ನೀರು ಹರಿಸಲಾಗುವುದು ಎಂದು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೆ ರೈತರ ಹಿತದೃಷ್ಟಿಯಿಂದಾಗಿ ಈಗಾಗಲೇ ಶೇಂಗಾ, ಸಜ್ಜೆ, ಜೋಳ, ಸೂರ್ಯಕಾಂತಿ, ಮೆಣಸಿನಕಾಯಿ ಸೇರಿದಂತೆ ಇನ್ನಿತರ ಬೆಳೆಗಳನ್ನು ಬೆಳೆಯಲಾಗಿದೆ.

ಅವು ಕಟಾವಿಗೆ ಬರಲು ಇನ್ನೂ ಒಂದು ತಿಂಗಳು ಬೇಕಾಗುತ್ತದೆ ಹಾಗಾಗಿ ರೈತರ ಹಿತದೃಷ್ಟಿಯಿಂದ ಈ ಹಿಂದೆ ಸಿಎಂ ಯಡಿಯೂರಪ್ಪಗೆ ಮನವಿ ಕೂಡ ಮಾಡಲಾಗಿತ್ತು, ಮನವಿಗೆ ಸ್ಪಂದಿಸಿರುವ ಸರ್ಕಾರ ಮಾ. 31ರವರೆಗೆ ನೀರು ಹರಿಸುವುದಾಗಿ ಡಿಸಿಎಂ ಗೋವಿಂದ ಕಾರಜೋಳ ಆದೇಶ ಹೊರಡಿಸಿದ್ದಾರೆ.

ಹೀಗಾಗಿ ಮಾ.31ರವರೆಗೆ ಕಾಲುವೆಗೆ ನೀರು ಹರಿಯಲಿದೆ ಎಂದು ತಿಳಿಸುವ ಮೂಲಕ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ, ಶಾಸಕ ರಾಜುಗೌಡ ಸಿಎಂ ಹಾಗೂ ಗೋವಿಂದ ಕಾರಜೋಳಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Related